ಕರಾವಳಿ

ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ – ಇಬ್ಬರ ಬಂಧನ- ಪ್ರಚಾರಕೊಸ್ಕರ ನಡೆಯಿತೇ ಈ ದೇಶದ್ರೋಹದ ಕೃತ್ಯ?

Pinterest LinkedIn Tumblr

ಮಂಗಳೂರು, ಡಿಸೆಂಬರ್. 05 : ಕೆಲವು ದಿನಗಳ ಹಿಂದೆ ಮಂಗಳೂರಿನ ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬಗ್ಗೆ ಶನಿವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು, ಬಿಜೈನ ಅಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಹಾಗೂ ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಪ್ರಚೋಧನಕಾರಿ ಗೋಡೆ ಬರಹಕ್ಕೆ ಸಂಬಂಧಿಸಿ ಇಬ್ಬರನ್ನು ನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬಂಧಿತರನ್ನು ತೀರ್ಥಹಳ್ಳಿಯ ಮಹಮ್ಮದ್ ಶಾರಿಖ್(22) ಮತ್ತು ಮಾಜ್ ಮುನೀರ್ ಅಹಮ್ಮದ್(21) ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ಶಾರೀಕ್ ತೀರ್ಥಹಳ್ಳಿಯವನಾಗಿದ್ದು, ಬಿ.ಕಾಂ ವಿದ್ಯಾರ್ಥಿಯಾಗಿದ್ದಾನೆ, ಮಾಜ್ ಎಂಬಾತನೂ ತೀರ್ಥಹಳ್ಳಿಯವನಾಗಿದ್ದು, ಅಂತಿಮ ವರ್ಷದ ಎಂ.ಟೆಕ್ ವಿದ್ಯಾರ್ಥಿಯಾಗಿದ್ದಾನೆ.

ಮೊದಲು ಆರೋಪಿಗಳು ಬಂದರು ಠಾಣಾ ವ್ಯಾಪ್ತಿಯ ಕೋರ್ಟ್ ರಸ್ತೆಯಲ್ಲಿ ಬರೆದಿದ್ದರು ಆದರೆ ಇದನ್ನು‌ ಯಾರೂ ಗಮನಿಸದ ಕಾರಣ ಜನರ ಗಮನಕ್ಕೆ ಬಂದಿರಲಿಲ್ಲ ಹೀಗಾಗಿ ಕದ್ರಿ ರಸ್ತೆಯಲ್ಲಿನ ಪ್ಲಾಟ್ ನ ಗೋಡೆಯಲ್ಲಿ ಬರೆದಿದ್ದು, ಅದು ಸಾರ್ವಜನಿಕರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಅವರು ಬಿಜೈನ ಗೋಡೆಗಳ ಮೇಲೆ ಬರೆಯುವ ಮೂರು ವಾರಗಳ ಮೊದಲು ಅವರು ಕೋರ್ಟ್ ರಸ್ತೆಯಲ್ಲಿ ಗೋಡೆಯಲ್ಲಿ ಬರೆದಿದ್ದಾರೆ. ಕೋರ್ಟ್ ರಸ್ತೆಯಲ್ಲಿ ಗೋಡೆ ಬರಹವನ್ನು ಅರೇಬಿಕ್ ಭಾಷೆಯಲ್ಲಿ ಬರೆಯದ್ದಾಗಿದ್ದು ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾಗಿದೆ. ಆದರೆ ಇಲ್ಲಿನ ಜನರಿಗೆ ಭಾಷೆ ಅರ್ಥವಾಗದ ಕಾರಣ ಯಾರೂ ಈ ಗೋಡೆಬರಹವನ್ನು ಗಮನಿಸಿರಲಿಲ್ಲ. ಪ್ರಚಾರ ಲಭಿಸದ ಕಾರಣ ಈ ಆರೋಪಿಗಳು ಬಿಜೈನ ಆಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಬರೆಯಲು ತೀರ್ಮಾನಿಸಿದರು ಎಂದು ಕಮಿಷನರ್ ವಿವರಿಸಿದ್ದಾರೆ.

ಶಾರಿಖ್ ತೀರ್ಥಹಳ್ಳಿಯ ತನ್ನ ತಂದೆಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮತ್ತು ಮಾಜ್ ಅಂತಿಮ ವರ್ಷದ ಎಂ.ಟೆಕ್ ಮಾಡಿಕೊಂಡು ಮಂಗಳೂರಿನಲ್ಲಿ ಆನ್ ಲೈನ್ ಫುಡ್ ಡೆಲಿವರಿ ಮಾಡುತ್ತಿದ್ದ ಎನ್ನಲಾಗಿದೆ. ಇಬ್ಬರು ಆರೋಪಿಗಳು ಒಂದೇ ಊರಿನವರಾಗಿದ್ದು, ಗೋಡೆ ಬರಹ ಯಾವ ಉದ್ದೇಶಕ್ಕಾಗಿ ಬರೆದಿದ್ದರು ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.

ಆರೋಪಿ ಮೊಹಮ್ಮದ್ ಶಾರಿಕ್ ತೀರ್ಥಹಳ್ಳಿಯಲ್ಲಿ ಬಟ್ಟೆ ಅಂಗಡಿ ನಡೆಸುತ್ತಿದ್ದಾನೆ. ಮತ್ತೊಬ್ಬ ಆರೋಪಿ ಮಜ್ ಮುನೀರ್ ಅಹಮದ್ ಮಂಗಳೂರಿನ ಖಾಸಗಿ ಕಾಲೇಜಿನಿಂದ ಬಿ ಟೆಕ್ ಓದುತ್ತಿದ್ದಾನೆ. ಆರ್ಯ ಸಮಾಜ ರಸ್ತೆ ಬಳಿಯ ಬಾಡಿಗೆ ಮನೆಯಲ್ಲಿ ತಂಗಿದ್ದಾನೆ. ಮಂಗಳೂರಿನಲ್ಲಿ ಮೂರು ತಿಂಗಳಿನಿಂದ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪ್ರಚಾರಕೊಸ್ಕರ ಈ ಆರೋಪಿಗಳು ಈ ಅಪರಾಧ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಜಾಲಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ನಾವು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ ಮತ್ತು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡುತ್ತೇವೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು. ಅವರು ಯಾವುದಾದರೂ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಡಿಸಿಪಿ ವಿನಯ್ ಗಾಂವ್‌ಕರ್ ಉಪಸ್ತಿತರಿದ್ದರು.

ಘಟನೆ ವಿವರ :

ನ.27ರಂದು ನಗರದ ಬಿಜೈ ಮತ್ತು ಕೋರ್ಟ್ ಸಮೀಪ ಕೆಲದಿನಗಳ ಹಿಂದೆ ಕಂಡು ಬಂದ ಉಗ್ರರನ್ನು ಬೆಂಬಲಿಸಿ ಬರೆದ ಗೋಡೆ ಬರಹ ಕಂಡು ಬಂದಿತ್ತು. ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ “ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ.” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

“Do not force us to invite Lashkar-e-Toiba and Taliban to Deal with Sanghis and Manvedis” ಎಂದು ಉಗ್ರರ ಪರವಾಗಿ ಕಿಡಿಗೇಡಿಗಳು ಬರೆದಿದ್ದರು. ಅಷ್ಟೇ ಅಲ್ಲದೇ ಹ್ಯಾಷ್ ಟ್ಯಾಗ್ ಹಾಕಿ, “ಲಷ್ಕರ್‌‌ ಜಿಂದಾಬಾದ್”‌‌‌‌‌ ಎಂದು ಬರೆಯಲಾಗಿತ್ತು. ಬಳಿಕ ಕದ್ರಿ ಪೊಲೀಸರು ವಿವಾದಿತ ಬರಹದ ಮೇಲೆ ಪೈಂಟ್‌ ಬಳಿದು ಅದನ್ನು ಅಳಿಸಿ ಹಾಕಿದ್ದಾರೆ.

ಬಳಿಕ ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು.

ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಕಿಡಿಗೇಡಿಗಳು ಉರ್ದು ಭಾಷೆಯಲ್ಲಿ ‘Gustuk e Rasool ek hi saza sar tan say juda’ ಅಂದರೆ, “ಪ್ರವಾದಿಗೆ ಕೋಪ ಬಂದರೆ ಒಂದೇ ಶಿಕ್ಷೆ, ಅದು ತಲೆ ದೇಹದಿಂದ ಬೇರ್ಪಡುವುದು” ಎಂಬ ವಿವಾದಾತ್ಮಕ ಬರಹವನ್ನು ಬರೆದಿದ್ದಾರೆ. ಕಪ್ಪು ಬಣ್ಣದ ಪೈಂಟ್ ಬಳಸಿ ರಾತ್ರಿ ವೇಳೆ ಬರೆಯಲಾಗಿದ್ದು, ಮರುದಿನ ಬೆಳಗ್ಗೆ ವಿಷಯ ಬೆಳಕಿಗೆ ಬಂದಿದೆ.

Comments are closed.