ಕರಾವಳಿ

ಹಾಲಾಡಿಯಲ್ಲಿ ಅಪಘಾತ: ಕೆ.ಎಂ.ಎಫ್. ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ದಾರುಣ ಸಾವು

Pinterest LinkedIn Tumblr

ಕುಂದಾಪುರ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕೆ.ಎಂ.ಎಫ್. ನಿರ್ದೇಶಕ, ಪ್ರಗತಿಪರ ಕೃಷಿಕ ಹದ್ದೂರು ರಾಜೀವ ಶೆಟ್ಟಿ(60) ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಮಧ್ಯಾಹ್ನ ಹಾಲಾಡಿಯಲ್ಲಿ ನಡೆದಿದೆ.

ಹಾಲಾಡಿಯಲ್ಲಿ ಕಾರ್ಯಕ್ರಮ ಮುಗಿಸಿ ಶಂಕರನಾರಾಯಣಕ್ಕೆ ಬರುತ್ತಿರುವ ಸಂದರ್ಭ ಹಾಲಾಡಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ರಾಜೀವ ಶೆಟ್ಟಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಹದ್ದೂರು ರಾಜೀವ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾಗಿದ್ದು, ಹೈನುಗಾರಿಕೆಯಲ್ಲಿತೊಡಗಿಸಿಕೊಂಡಿದ್ದಲ್ಲದೇ ಕೆ.ಎಂ. ಎಫ್‌. ನಿರ್ದೇಶಕರಾಗಿದ್ದು, ಬೈಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಅಲ್ಲದೇ ಭಾರತೀಯ ಜನತಾ ಪಾರ್ಟಿ ಮುಖಂಡರಾಗಿದ್ದರು.

ಮಾಜಿ ಜಿ.ಪಂ ಉಪಾಧ್ಯಕ್ಷೆ ಮಮತಾ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Comments are closed.