ಮಂಗಳೂರು, ಡಿಸೆಂಬರ್.10: ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಬಿಜೆಪಿ ಜನಪ್ರತಿನಿಧಿಗಳ ನಿಯೋಗದಿಂದ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಸರಕಾರದ ಮುಖ್ಯಸಚೇತಕರಾದ ಶ್ರೀ ಸುನಿಲ್ ಕುಮಾರ್, ಶಾಸಕರಾದ ಶ್ರೀ ರಘುಪತಿ ಭಟ್, ಶ್ರೀ ಸಂಜೀವ ಮಠಂದೂರು, ಶ್ರೀ ರಾಜೇಶ್ ನಾಯ್ಕ್, ಡಾ. ಶ್ರೀ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಶ್ರೀ ಹರೀಶ್ ಪೂಂಜಾ ಉಪಸ್ಥಿತರಿದ್ದರು.
Comments are closed.