ಕರಾವಳಿ

ಸರ್ವಧರ್ಮ ಸಮ್ಮೇಳನ: ನಾಳೆ ವಸತಿ ಸಚಿವ ವಿ ಸೋಮಣ್ಣ ಧರ್ಮಸ್ಥಳಕ್ಕೆ

Pinterest LinkedIn Tumblr

ಮಂಗಳೂರು ಡಿಸೆಂಬರ್ 12 : ರಾಜ್ಯ ವಸತಿ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರು ಡಿಸೆಂಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿಸೆಂಬರ್ 13 ರಂದು ಬೆಳಿಗ್ಗೆ 11.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ, ಸಂಜೆ 5.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿರುವ ಸರ್ವಧರ್ಮ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Comments are closed.