ಕರಾವಳಿ

ಕದ್ರಿ ಲಕ್ಷದೀಪೋತ್ಸವ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದಿಂದ ಭಜನಾ ಸಂಕೀರ್ತನೆ

Pinterest LinkedIn Tumblr

ಮಂಗಳೂರು : ಶ್ರೀಕ್ಷೇತ್ರ ಕದ್ರಿಯಲ್ಲಿ ಲಕ್ಷ ದೀಪೋತ್ಸವದ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಸಂಜೆ ಭಜನಾ ಸಂಕೀರ್ತನಾ ಕಾರ್ಯಕ್ರಮ ಜರಗಿತು.

ಶ್ರೀ ಕ್ಷೇತ್ರದ ಅರ್ಚಕರಾದ ರಾಘವೇಂದ್ರ ಅಡಿಗ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಎಂ.ಬಿ. ಪುರಾಣಿಕ್, ಅರುಣ್ ಕದ್ರಿ, ವಿಪ್ರ ಸಮಾಗಮ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ರಾವ್, ಸುಧಾಕರ ರಾವ್ ಪೇಜಾವರ ಮೊದಲಾದವರು ಉಪಸ್ಥಿತರಿದ್ದರು.

ಮದ್ಧರಿ ನಾಮಸಂಕೀರ್ತನಾ ಬಳಗ ಬಾಳ, ಕಳವಾರು, ನೃತ್ಯ ಕಲಾ ಭಾರತಿ ನೀರುಮಾರ್ಗ, ಮುಖ್ಯಪ್ರಾಣ ಭಜನಾ ಮಂಡಳಿ ಕಾವೂರು, ವಿಪ್ರ ಭಜನಾ ಸಂಕೀರ್ತನ ಬಳಗ ಕದ್ರಿ ಮಂಗಳೂರು ಮೊದಲಾದ ತಂಡಗಳು ಭಜನಾ ಸಂಕೀರ್ತನ ಕಾರ್ಯಕ್ರಮದಲ್ಲಿ ಪಾಲ್ಗೊಂಡವು.

Comments are closed.