ಮಂಗಳೂರು, ಡಿಸೆಂಬರ್ 18: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ಸುಮಾರು 4,35,200 ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್ಎಫ್ ಅಧಿಕಾರಿಗಳು ಪತ್ತೆ ಮಾಡಿ ಬಂಧಿಸಿದ್ದಾರೆ.
ಕೇರಳದ ಕಾಸರಗೋಡು ಸಮೀಪದ ಚಿತ್ತಾರಿ ಬಾರಿಕ್ಕಾಡ್ ನಿವಾಸಿ ತಾಜುದ್ದೀನ್ (39) ಬಂಧಿತ ಆರೋಪಿ.
ಈತ ಗುರುವಾರ ಏರ್ ಇಂಡಿಯಾ ವಿಮಾನದಲ್ಲಿ ದುಬೈಗೆ ಪ್ರಯಾಣಿಸಲು ಸಂಜೆ 4:30ರ ವೇಳೆಗೆ ವಿಮಾನ ನಿಲ್ದಾಣಕ್ಕೆ ಬಂದಿದ್ದು, ತಪಾಸಣೆ ವೇಳೆ ಯೂರೊ ಹಾಗು ಯುಎಇ ದಿರ್ಹಾಮ್ ಪತ್ತೆಯಾಗಿದೆ. ಧರಿಸಿದ್ದ ಒಳ ಬಟ್ಟೆಯ ಒಳಗಡೆ ಇಟ್ಟು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಸಿಐಎಸ್ಎಫ್ ಅಧಿಕಾರಿ ದೇವೇಂದರ್ ಸಿಂಗ್ ತಪಾಸಣೆ ನಡೆಸಿ ಅಕ್ರಮ ಸಾಗಾಟದ ವಿದೇಶಿ ಕರೆನ್ಸಿ ಪತ್ತೆ ಮಾಡಿದ್ದಾರೆ. ಆರೋಪಿ ಸಹಿತ ಸೊತ್ತನ್ನು ಮುಂದಿನ ತನಿಖೆಗೆ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
Comments are closed.