ಬೆಂಗಳೂರು: ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕಿನ ರೂಪಾಂತರ ಹಾವಳಿ ಭೀತಿ ಹೆಚ್ಚಾಗಿರುವುದರಿಂದ ಇಂದಿನಿಂದ 9 ದಿನಗಳ ಕಾಲ ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 6 ರವರೆಗೆ ಈ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು ಬಂದ್ ಆಗಿರುತ್ತವೆ ಜನರ ಓಡಾಟವೂ ಇರುವುದಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೂ ಬ್ರೇಕ್ ಬೀಳಲಿದೆ.
ಇಂದು ಸಂಜೆ 5 ಗಂಟೆಗೆ ನೈಟ್ ಕರ್ಫ್ಯೂ ಬಗ್ಗೆ ಮಾರ್ಗಸೂಚಿ ಬಿಡುಗಡೆಯಾಗಲಿದೆ.
Comments are closed.