ಕರ್ನಾಟಕ

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಉಪಸಭಾಪತಿ ಧರ್ಮೇಗೌಡ

Pinterest LinkedIn Tumblr

ಚಿಕ್ಕಮಗಳೂರು: ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ನಿನ್ನೆ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಘಟನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಧರ್ಮೇಗೌಡ ಅವರು ಬರೆದಿಟ್ಟಿರುವ ಡೆತ್​ನೋಟ್​ನಿಂದ ತಿಳಿದುಬಂದಿದೆ.

ನಿನ್ನೆ ತಡರಾತ್ರಿ ಕಡೂರು ತಾಲೂಕು ಬಳಿ ರೈಲ್ವೆ ಹಳಿಯಲ್ಲಿ ಅವರ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಅವರು ಪತ್ನಿ ಮಮತಾ, ಮಗ ಸೋನಾಲ್, ಮಗಳು ಸೋನಾಲಿ ಅವರನ್ನ ಅಗಲಿದ್ದಾರೆ. ಸಖರಾಯಪಟ್ಟಣದಿಂದ ಸಂಜೆ 6:30ಕ್ಕೆ ಖಾಸಗಿ ಡ್ರೈವರ್ ಜೊತೆ ಕಾರಿನಲ್ಲಿ ಹೊರಟ ಅವರು ಕಡೂರು ತಾಲೂಕು ಗುಣಸಾಗರ ಬಳಿ ಕಾರು ನಿಲ್ಲಿಸಿದ್ದಾರೆ. ತಮ್ಮಎಸ್ಕಾರ್ಟ್ ಸಿಬ್ಬಂದಿಯನ್ನ ಅಲ್ಲಿಯೇ ಬಿಟ್ಟು ಖಾಸಗಿ ಡ್ರೈವರ್ ಜೊತೆ ಅವರು ಹೊರಟಿದ್ದರು. ಒಬ್ಬ ವ್ಯಕ್ತಿಯ ಜೊತೆ ಸ್ವಲ್ಪ ಕೆಲಸ ಇದ್ದು ಹೋಗಿ ಬರುತ್ತೇನೆ ಎಂದು ಹೇಳಿದ್ದರು. ನಂತರ ಕಡೂರಿನ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಶತಾಬ್ದಿ ಎಕ್ಸ್​ಪ್ರೆಸ್ ಬರುವ ಸಮಯ ವಿಚಾರಿಸಿದರೆನ್ನಲಾಗಿದೆ.

ಎಸ್.ಎಲ್. ಧರ್ಮೇಗೌಡ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸದೃಢ ಕುಟುಂಬದ ಹಿನ್ನೆಲೆಯವರು. ಅವರ ಕುಟುಂಬ ರಾಜಕೀಯವಾಗಿ ಶಕ್ತಿಶಾಲಿಯಾಗಿತ್ತು. ಆರ್ಥಿಕವಾಗಿಯೂ ಅವರು ಒಳ್ಳೆಯ ಸ್ಥಿತಿಯಲ್ಲಿದ್ದರು. ನಿನ್ನೆ ಚಿಕ್ಕಮಗಳೂರಿನ ಕಾರ್ಯಕ್ರಮವೊಂದರಲ್ಲಿ ಸಂತೋಷದಿಂದಲೇ ಅವರು ಪಾಲ್ಗೊಂಡಿದ್ದರು.

ಇತ್ತೀಚೆಗೆ ವಿಧಾನಪರಿಷತ್​ನಲ್ಲಿ ನಡೆದ ಗಲಾಟೆ ಘಟನೆ ಧರ್ಮೇಗೌಡ ಅವರ ಮನಸಿಗೆ ಘಾಸಿ ತಂದಿತ್ತು. ಸಭಾಪತಿ ಪೀಠದ ಮೇಲೆ ಕುಳಿತಿದ್ದ ಅವರನ್ನ ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಇದು ಅವರಿಗೆ ಬಹಳ ನೋವು ತಂದಿತ್ತು. ಮಾಧ್ಯಮಗಳ ಮುಂದೆ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಹೋದರೂ ತಮ್ಮ ಆಪ್ತವಲಯದಲ್ಲಿ ಸಾಕಷ್ಟು ನೋವು ತೋಡಿಕೊಂಡಿದ್ದರು. ಡೆತ್​ನೋಟ್​ನಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ, ಘಟನೆಯಿಂದ ಬಹಳ ನೋವಾಗಿತ್ತು ಎಂದಿದ್ಧಾರೆ. ಡೆತ್ ನೋಟ್​ನಲ್ಲಿ ತಮ್ಮ ಪತ್ನಿ, ಮಗ ಮತ್ತು ಮಗಳ ಕ್ಷಮೆ ಕೂಡ ಅವರು ಯಾಚಿಸಿದ್ಧಾರೆ.

Comments are closed.