ಕರಾವಳಿ

ಗ್ರಾಮ ಪಂಚಾಯತ್ ಚುನಾವಣೆ : ಭರದಿಂದ ಸಾಗುತ್ತಿದೆ ಮತ ಎಣಿಕೆ – ಇಲ್ಲಿದೆ ವಿಜೇತರ ವಿವರ

Pinterest LinkedIn Tumblr

ಮಂಗಳೂರು, ಡಿಸೆಂಬರ್.30 : ದ.ಕ. ಜಿಲ್ಲೆಯ ಏಳು ತಾಲೂಕಗಳಿಗೆ ನಡೆದ ಗ್ರಾಮ ಪಂಚಾಯತ್ ನ ಎರಡು ಹಂತದ ಚುನಾವಣೆಯ ಮತ ಎಣಿಕೆಕಾರ್ಯ ಇಂದು ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಬೊಂದೇಲ್‌ನ ಮಹಾತ್ಮಾ ಗಾಂಧಿ ಸೆಂಟನರಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ಆರಂಭಗೊಂಡಿದೆ.

ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ-2020 ರ ಸಂಬಂಧ ಎಲ್ಲಾ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಡಿಸೆಂಬರ್ 29 ರಂದು ಮಧ್ಯರಾತ್ರಿ 12 ಗಂಟೆಯಿಂದ ಡಿಸೆಂಬರ್ 30 ರ ಮಧ್ಯರಾತ್ರಿ 12 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಂತೆ ನಿಷೇಧಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಮತ ಎಣಿಕಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ವಿಜಯೋತ್ಸವ, ಬಹಿರಂಗ ಸಭೆ-ಸಮಾರಂಭಗಳನ್ನು ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ-ರೋಖ ಹಾಗೂ ಮುತ್ತಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

ಶಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಯಾವುದೇ ಸಂರಕ್ಷಾರ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ /ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಸುವ್ಯಸವ್ಥೆಗೆ ಭಾದೆಯನ್ನುಂಟು ಮಾಡಬಹುದಾದ, ರಾಜ್ಯದ ಭದ್ರತೆಯನ್ನು ಕಡೆಗಣಿಸಬಹುದಾದ ಅಥವಾ ಅಪರಾಧವನ್ನು ಮಾಡಲು ಪ್ರಚೋಧಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಉಪಯೋಗ ಮಾಡುವುದು ಮತ್ತು ಚಿತ್ರಗಳನ್ನು, ಸಂಕೇತಗಳನ್ನು ಭಿತ್ತಿ ಪತ್ರಗಳನ್ನು ಇತರ ಯವುದೇ ವಸ್ತು ಅಥವಾ ಪದಾರ್ಥವನ್ನು ತಯಾರಿಸುವುದು, ಪ್ರದರ್ಶಿಸುವುದನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.

ಕೆಲವೊಂದು ವಾರ್ಡ್ ಗಳ ಫಲಿತಾಂಶ ಬರಲಾರಂಭಿಸಿದ್ದು, ಫಲಿತಾಂಶದ ವಿವರ ಹೀಗಿದೆ.

ಕೊಣಾಜೆ ಗ್ರಾಪಂ 4ನೇ ವಾರ್ಡ್ ನಲ್ಲಿ ಮುಹಮ್ಮದ್ ಇಕ್ಬಾಲ್ (ಕಾಂಗ್ರೆಸ್ ಬೆಂಬಲಿತ), ಗೀತಾ (ಬಿಜೆಪಿ ಬೆಂಬಲಿತ) ಗೆಲುವು

ಕುಪ್ಪೆಪದವು ವಾರ್ಡ್ 1- ಕೆ.ರಫೀಕ್ ಆಚಾರಿಜೋರ ಮತ್ತು ಪುಷ್ಪಾ ಸಂಕಪ್ಪ ನಾಯಕ್ (ಜೆಡಿಎಸ್ ಬೆಂಬಲಿತ) ರಿಗೆ ಗೆಲುವು.

ತಲಪಾಡಿ ಗ್ರಾಪಂ: 3ನೇ ವಾರ್ಡ್ ನಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರಾದ ಇಸ್ಮಾಯೀಲ್ ಶಾಫಿ (430) ಹಾಗೂ ಸುಮಾಯ್ಯ(450) ಗೆಲುವು ಸಾಧಿಸಿದ್ದಾರೆ.

ಪಾವೂರು 1ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತರಾದ ರಿಯಾಝ್ ಅಹ್ಮದ್(307) ಮತ್ತು ರವಿಕಲಾ(265)ರಿಗೆ ಗೆಲುವು.

ಮುಲ್ಕಿ ಹೋಬಳಿ: ಬಳ್ಕುಂಜೆ ಗ್ರಾಪಂನ ಕರ್ನಿರೆ 1ರಲ್ಲಿ ಕಾಂಗ್ರೆಸ್ ಬೆಂಬಲಿತ ಪ್ರಶಾಂತ್ ಶೆಟ್ಟಿ (277) ಹಾಗೂ ವನಜಾ ಕೋಟ್ಯಾನ್ (251) ವಿಜೇತರಾಗಿದ್ದಾರೆ.

ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಸಂಜೆ ವೇಳೆಗೆ ಎಲ್ಲಾ ಅಭ್ಯರ್ಥಿಗಳ ಫಲಿತಾಂಶ ಲಭ್ಯವಾಗಲಿದೆ.

Comments are closed.