ಕರಾವಳಿ

ಬೈಂದೂರಿನ ನಾಡ-ಗುಡ್ಡೆಯಂಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ರಿಕ್ಷಾ ಚಾಲಕ

Pinterest LinkedIn Tumblr

ಕುಂದಾಪುರ: ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ನಾಡಾ ಗುಡ್ಡೆಯಂಗಡಿ ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಅಣ್ಣಪ್ಪ (35) ಆತ್ಮಹತ್ಯೆಗೆ ಶರಣಾದ ರಿಕ್ಷಾ ಚಾಲಕ.

ಅಣ್ಣಪ್ಪ ಅವರು ಅವಿವಾಹಿತರಾಗಿದ್ದು ಇಂದು ಮನೆ ಸಮೀಪದ ಹಾಡಿಯಲ್ಲಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಕಾಯ್ಕಿಣಿ ಭೇಟಿ ನೀಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Comments are closed.