ಕರಾವಳಿ

ಬೀಫ್ ಸ್ಟಾಲ್ ಗೆ ಬೆಂಕಿ: ಆರೋಪಿಗಳ ಶೀಘ್ರ ಬಂಧನಕ್ಕೆ ಶಾಸಕ ಖಾದರ್ ಆಗ್ರಹ

Pinterest LinkedIn Tumblr

ಮಂಗಳೂರು: ಉಳ್ಳಾಲ ನಗರ ಸಭೆ ವ್ಯಾಪ್ತಿಯ ತೊಕ್ಕೋಟು ಒಳಪೇಟೆ ಬೀಫ್ ಸ್ಟಾಲ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಹಾಗು ಅದೇ ಸ್ಥಳದಲ್ಲಿ ವ್ಯಾಪಾರ ಮಾಡಲು ನಗರಸಭೆ ವ್ಯವಸ್ಥೆ ಕಲ್ಪಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಉಳ್ಳಾಲ ನಗರ ಸಭೆ ವ್ಯಾಪ್ತಿಯ ತೊಕ್ಕೋಟು ಒಳಪೇಟೆಯ ಬೀಫ್ ಸ್ಟಾಲ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದು, ಇದು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಹುನ್ನಾರ ಎಂದು ಆರೋಪಿಸಿರುವ ಅವರು, ಇಂಥಹ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಈಗಾಗಲೇ ಮಂಗಳೂರು ನಗರ ಪೊಲೀಸ್ ಕಮೀಷನರ್ ಜತೆ ಮಾತುಕತೆ ನಡೆಸಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವ ಭರವಸೆಯನ್ನು ಕೂಡಾ ನೀಡಿದ್ದಾರೆಂದು ಶಾಸಕರು ತಿಳಿಸಿದ್ದಾರೆ.

ಪ್ರಸ್ತುತ ಜಾಗದಲ್ಲೇ ವ್ಯಾಪಾರ ನಡೆಸಲು ನಗರಸಭೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಅವರು ಈ ಸಂದರ್ಭದಲ್ಲಿ ನಗರಸಭಾಡಳಿತಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

Comments are closed.