ಕರಾವಳಿ

ಬಿಜೈ ಕಾಪಿಕಾಡ್ ನೇಮೋತ್ಸವ: ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಸಂಸದ ಕಟೀಲ್

Pinterest LinkedIn Tumblr

ಮಂಗಳೂರು : ಬಿಜೈ ಕಾಪಿಕಾಡ್ ದೈವರಾಜ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜ.9, ಶನಿವಾರದಂದು ಸಂಜೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭ ದೈವಸ್ಥಾನದ ವತಿಯಿಂದ ಸಂಸದರನ್ನು ಶಾಲು ಹೊದಿಸಿ ಫಲ ತಾಂಬೂಲದೊಂದಿಗೆ ಸಿರಿಮುಡಿ ಗಂಧ ಪ್ರಸಾದ ನೀಡಿ ಗೌರವಿಸಲಾಯಿತು.

ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಗೌರವಾಧ್ಯಕ್ಷ ಮಾದವ ಸುವರ್ಣ, ಗುರಿಕಾರ ರಾಜೇಂದ್ರ ಕಿರೋಡಿಯಾನ್, ಕದ್ರಿ ವಾರ್ಡ್ ಕಾರ್ಪೊರೇಟರ್ ಕದ್ರಿ ಮನೋಹರ್ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಮುಂಖಂಡ ಗುರುಚರಣ್, ಸಂತೋಷ್ ಉಳ್ಳಾಲ್ ಹಾಗು ಕ್ಷೇತ್ರದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವರದಿ ಹಾಗು ಚಿತ್ರ : ಸತೀಶ್ ಕಾಪಿಕಾಡ್

Comments are closed.