ಕರಾವಳಿ

ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ಗೆ ಪೊಲೀಸರ ದಾಳಿ:ನಾಲ್ವರು ಮಹಿಳೆಯರ ರಕ್ಷಣೆ-ಐವರ ಬಂಧನ

Pinterest LinkedIn Tumblr

ಮಂಗಳೂರು : ವೇಶ್ಯಾವಾಟಿಕೆ ನಡೆಯುತ್ತಿದ್ದ ಮಂಗಳೂರಿನ ಲಾಡ್ಜೊಂದಕ್ಕೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದು, ಐವರನ್ನು ಬಂಧಿಸಿದ್ದಾರೆ.

ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಹಿಂದೂಸ್ಥಾನ್ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರು ಉತ್ತರ (ಬಂದರು) ಪೊಲೀಸರು ದಾಳಿ ನಡೆಸಿ ಲಾಡ್ಜ್ ಮಾಲಕ ಸಹಿತ ಐವರನ್ನು ಬಂಧಿಸಿದ್ದಾರೆ.

ಲಾಡ್ಜ್ ಮಾಲಕ ಮೋಹನ್, ಮ್ಯಾನೇಜರ್ ಅಬ್ದುಲ್ ಬಶೀರ್, ರೂಮ್ ಬಾಯ್ ಉದಯ ಶೆಟ್ಟಿ, ಗಿರಾಕಿಗಳಾದ ಭರತ್ ಮತ್ತು ಬಾಲಕೃಷ್ಣ ಎಂಬವರನ್ನು ಪೊಲೀಸರು ಬಂಧಿಸಿದ್ದು, ವೇಶ್ಯಾವಾಟಿಕೆಗೆ ಮಹಿಳೆಯರನ್ನು ಕರೆ ತಂದಿದ್ದ ಆರೋಪಿ ಸುನಿಲ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರ ನಿರ್ದೇಶನದಂತೆ ಡಿಸಿಪಿಗಳಾದ ಹರಿರಾಂ ಶಂಕರ್, ವಿನಯ ಗಾಂವ್ಕರ್, ಎಸಿಪಿ ಜಗದೀಶ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ

ಬಂದರು ಠಾಣೆ ಇನ್‌ಸ್ಪೆಕ್ಟರ್ ಗಳಾದ ಗೋವಿಂದರಾಜು, ರೇವತಿ, ಪಿಎಸ್‌ಐಗಳಾದ ನಾಗರಾಜ್, ಜಗದೀಶ್ ಹಾಗು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Comments are closed.