ಕರಾವಳಿ

ಸಚಿವ ಸ್ಥಾನಕ್ಕಾಗಿ ಬ್ಲಾಕ್‌ಮೇಲ್ ಮಾಡಿಲ್ಲ, ಮಾಡಲ್ಲ: ಕಾರ್ಕಳ ಶಾಸಕ ಸುನೀಲ್ ಕುಮಾರ್

Pinterest LinkedIn Tumblr

ಉಡುಪಿ: ಸಂಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಸಮಾಧಾನ ವ್ಯಕತಪಡಿಸಿದ್ದಾರೆ. ಟ್ವೀಟ್ ಮೂಲಕ ತಮ್ಮ ಹೇಳಿಕೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಅವರು, ‘ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ.ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನುವುದು ಕೊನೆಯ ದಿನದವರೆಗೂ ರಾಜಕೀಯ ವಲಯದಲ್ಲಿ ಹಾಗೂ ಬಿಜೆಪಿ ಪಾಳಯದಲ್ಲಿ ಕೇಳಿ ಬಂದಿದ್ದ ಮಾತಾಗಿತ್ತು. ಆದರೆ ಕೊನೆಯ ಕ್ಷಣದ ಬೆಳವಣಿಗೆಯಲ್ಲಿ ಸುನೀಲ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ತಪ್ಪಿದೆ.ಇದು ಸುನೀಲ್ ಕುಮಾರ್ ಅವರ ಮುನಿಸಿಗೆ ಕಾರಣವಾಗಿದೆ.

 

Comments are closed.