ಕರಾವಳಿ

ಬೆಂಗಳೂರಿಗೆ ತೆರಳುತ್ತಿದ್ದ ಚಿತ್ರನಟ, ನಿರೂಪಕ,ಆರ್.ಜೆ ರೂಪೇಶ್ ಶೆಟ್ಟಿ ಕಾರು ಅಪಘಾತ

Pinterest LinkedIn Tumblr

ಮಂಗಳೂರು/ ನೆಲ್ಯಾಡಿ : ತುಳು ಚಿತ್ರನಟ, ನಿರೂಪಕ ರೂಪೇಶ್ ಶೆಟ್ಟಿಯವರ ಕಾರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಬುಧವಾರ ಸಂಜೆ ಅಪಘಾತಕ್ಕೀಡಾಗಿದ್ದು, ಸಣ್ಣ ಪುಟ್ಟ ಗಾಯಗಳೊಂದಿಗೆ ಅವರು ಪಾರಾಗಿದ್ದಾರೆ.

ಕಾರ್ಯಕ್ರಮದ ನಿಮಿತ್ತ ರೂಪೇಶ್‌ ಅವರು ಗೆಳೆಯರ ಜತೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಹಾಗು ಇವರ ಕಾರಿನ ನಡುವೆ ಮುಖಮುಖಿ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಕಾರ್ಯಕ್ರಮದ ನಿಮಿತ್ತ ತನ್ನ ಗೆಳೆಯರ ಜೊತೆ ಬೆಂಗಳೂರಿಗೆ ತೆರಳುತ್ತಿದ್ದ ರೂಪೇಶ್‌ ಶೆಟ್ಟಿ ಸಂಚರಿಸುತ್ತಿದ್ದ ಕಾರು ಶಿರಾಡಿ ಘಾಟಿಯಲ್ಲಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರೂಪೇಶ್ ಶೆಟ್ಟಿ ಹಾಗೂ ಸ್ನೇಹಿತರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Comments are closed.