ಕರಾವಳಿ

ದ.ಕ.ಜಿಲ್ಲೆಗೆ 24500 ಸಾವಿರ ಕೋವಿಸೀಲ್ಡ್ ಲಸಿಕೆ ಆಗಮನ : ಜ.16ರಿಂದ ವಿತರಣೆ ಆರಂಭ

Pinterest LinkedIn Tumblr

ಮಂಗಳೂರು, ಜನವರಿ.14: ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಗೆ ಇಂದು ಆಗಮಿಸಿದ ಕೋವಿಸೀಲ್ಡ್ ಲಸಿಕೆಯನ್ನು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಇಂದು ಬೆಳಿಗ್ಗೆ ವೆನ್ಲಾಕ್ಆವರಣದಲ್ಲಿ ಸ್ವಾಗತಿಸಿ ಅವುಗಳನ್ನು ಇಳಿಸಿಕೂಂಡರು.

ಜಿಲ್ಲೆಗೆ ಇಂದು 24500 ಸಾವಿರ ಕೊವೀಡ್-19 ರ ಕೋವಿಸೀಲ್ಡ್ ಲಸಿಕೆಯು ಮೈಸೂರುನಿಂದ ಆಗಮಿಸಿದ್ದು, ರಾಜ್ಯ ಸರ್ಕಾರದಿಂದ ಹೊಸದಾಗಿ ನೀಡಿರುವ ಐ.ಎಲ್.ಆರ್ ಲಸಿಕಾ ಸಂಗ್ರಹಣದ ಕೋಲ್ಡ್ ಸ್ಟೋರೆಜ್‌ದಲ್ಲಿ ಲಸಿಕೆಯನ್ನು ಸಂಗ್ರಹಿಸಿ ಇಡಲಾಗಿದೆ.

ಜನವರಿ 16 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟದಾದ್ಯಂತ ಲಸಿಕಾಕರಣಕ್ಕೆ , ಆನ್‌ಲೈನ್ ಮೂಲಕ ಚಾಲನೆ ದೊರೆಯಲಿದೆ. ಇದನ್ನು ಎಲ್ಲ ಸರಕಾರಿ ಆಸ್ಪತ್ರೆಗಳ ನೊಂದಾಯಿತ ಆರೋಗ್ಯ ಸಿಬ್ಬಂದಿಗೆ ಮುಂದಿನ ದಿನಗಳಲ್ಲಿ ಹಂಚಿಕೆಯಾಗಿ ಬರುವ ಲಸಿಕೆಯನ್ನು ಉಳಿದ ನೊಂದಾಯಿತ ಆರೋಗ್ಯ ಸಿಬ್ಬಂದಿ ಹಾಗೂ ಕೊರೋನಾ ವಾರಿಯರ್ಸ್ ಗಳಿಗೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.16ರಿಂದ ಕೋವಿಡ್ ಲಸಿಕೆ ವಿತರಣೆ : ಯಾರಿಗೆ ಮೊದಲು? -ಲಸಿಕೆ ಪಡೆಯಲು ಏನು ಮಾಡಬೇಕು

ಕೋವಿಡ್ 19 ಸೊಂಕು ನಿರೋಧಕ ಲಸಿಕೆಯನ್ನು ಜನವರಿ 16 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಈಗಾಗಲೇ ಡ್ರೈರನ್‍ಕಾರ್ಯಕ್ರಮ ಯಶಸ್ವಿಯಾಗಿದ್ದು, ಜಿಲ್ಲೆಯಲ್ಲಿ ವೆನ್‍ಲಾಕ್ ಆಸ್ಪತ್ರೆ, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ(ಸುರತ್ಕಲ್)ದಲ್ಲಿ ಕೋವಿಡ್ ಲಸಿಕಾ ಶೇಖರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಒಂದು ಶಿಬಿರದಲ್ಲಿ 100 ನೊಂದಾಯಿತರಿಗೆ ಲಸಿಕೆ ನೀಡಲಾಗುತ್ತದೆ.ಮೊದಲಿಗೆ 1 ಕೋಟಿಯಷ್ಟಿರುವ ಆರೋಗ್ಯ ಸಿಬ್ಬಂದಿ ಹಾಗೂ ಮುಂಚೂಣಿಯಲ್ಲಿರುವ ಕರೋನಾ ಹೋರಾಟಗಾರರಿಗೆ ಲಸಿಕೆ ನೀಡಲಾಗುವುದು. ನಂತರ ಆರೋಗ್ಯ ಸಮಸ್ಯೆ ಹೊಂದಿರುವ ಹಾಗೂ 50 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 26 ಕೋಟಿಜನರಿಗೆಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು.

ಲಸಿಕೆ ಪಡೆಯುವ ಮೊದಲು ಕೋವಿನ್ ಆ್ಯಪ್‍ನಲ್ಲಿ ನೊಂದಾಯಿತರಾಗಿರಬೇಕು. ಅದರಂತೆ ನೊಂದಾಯಿತ ವ್ಯಕ್ತಿಯು ಲಸಿಕೆ ಪಡೆಯುವ ದಿನಾಂಕ ಹಾಗೂ ಗುರುತಿನ ಸಂದೇಶವನ್ನು ಪಡೆದುಕೊಳ್ಳಬೇಕು.

ಆರೋಗ್ಯ ಸಿಬ್ಬಂದಿ ವರ್ಗದಲ್ಲಿ ನರ್ಸ್ ಮತ್ತು ಸುಪರ್‍ವೈಸರ್, ಮೆಡಿಕಲ್ ಮತ್ತು ಪ್ಯಾರಾ ಮೆಡಿಕಲ್, ಕ್ಲಿನಿಕ್, ಲ್ಯಾಬೋರೇಟರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅವಕಾಶ ಕಲ್ಪಿಸಲಾಗಿದೆ.

ಮತದಾನ ಪ್ರಕ್ರಿಯೆಯಂತೆ ಕೋವಿಡ್ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ನಿರೀಕ್ಷಣಾ ಕೊಠಡಿ, ಲಸಿಕಾ ಕೊಠಡಿ ಹಾಗೂ ನಿಗಾ ಕೊಠಡಿ ಎಂಬ ಮೂರು ಕೊಠಡಿಗಳನ್ನು ರಚಿಸಲಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವೆರೆಗೆ ಲಸಿಕೆ ನೀಡಲಾಗುತ್ತದೆ. ಲಸಿಕೆ ಹಂಚಿಕೆಯ ಸಂದರ್ಭದಲ್ಲಿ ಲಸಿಕೆ ಪಡೆಯುವವರ ಮಾಹಿತಿ, ಲಸಿಕೆ ಹಾಕುವ ಹಾಗೂ ಲಸಿಕೆ ಹಾಕಿದ ನಂತರಅರ್ಧಗಂಟೆ ನಿಗಾ ಘಟಕದಲ್ಲಿರುವಂತೆ ಪೂರ್ವತಯಾರಿ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಮಾಹಿತಿ ನೀಡಿದರು.

Comments are closed.