ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಕ್ವಾರಿಗಳಲ್ಲಿ ಅಕ್ರಮವಾಗಿ, ಅನುಮತಿ ಪಡೆಯದೇ ಸ್ಪೋಟಕಗಳನ್ನು ದಾಸ್ತಾನು ಮಾಡಿರುವ ಕುರಿತಂತೆ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದ ಪ್ರಕರಣದ ಬೆನ್ನಲ್ಲೇ ಖುದ್ದು ಸಿಎಂ ಬಿ.ಎಸ್. ಯಡಿಯೂರಪ್ಪ ಅಕ್ರಮ ಗಣಿಗಾರಿಕೆಗೆ ಬ್ರೇಕ್ ಹಾಕಲು ಆದೇಶ ನೀಡಿದ್ದರು. ಅಲ್ಲದೇ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು ಕೂಡ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆ ಅಕ್ರಮವಾಗಿದ್ದರೆ ಅದನ್ನು ತಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಅಂತೆಯೇ ಉಡುಪಿ ಜಿಲ್ಲೆಯಲ್ಲಿರುವ ಅಕ್ರಮಕ್ಕೆ ಬ್ರೇಕ್ ಹಾಕಲು ಸದ್ಯ ಅಧಿಕಾರಿಗಳು ಮುಂದಾಗಿದ್ದಾರೆ.
Comments are closed.