ಕರ್ನಾಟಕ

ಶೃಂಗೇರಿಯಲ್ಲಿ 4 ತಿಂಗಳಿನಿಂದ ಅಪ್ರಾಪ್ತೆ ಮೇಲೆ 30ಕ್ಕೂ ಅಧಿಕ ಕಾಮಾಂಧರಿಂದ ಅತ್ಯಾಚಾರ: 17 ಮಂದಿ ಮೇಲೆ FIR

Pinterest LinkedIn Tumblr

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಶೃಂಗೇರಿ ಪೊಲೀಸರು 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಘಟನೆಗೆ ಸಹಕರಿಸಿದ ಬಾಲಕಿಯ ಚಿಕ್ಕಮ್ಮ ಗೀತಾ ಎನ್ನುವವಳ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ. ಶೃಂಗೇರಿ ತಾಲೂಕಿನಲ್ಲಿ ಅಪ್ರಾಪ್ತೆ ಮೇಲೆ ಕಳೆದ ಸೆಪ್ಟೆಂಬರ್‌ನಿಂದ 30ಕ್ಕೂ ಹೆಚ್ಚು ಮಂದಿ ಅತ್ಯಾಚಾರವೆಸಗಿದ ದಾರುಣ ಘಟನೆ ನಡೆದಿತ್ತು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಅವರು ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈವರೆಗೂ ಪೊಲೀಸರು 17 ಮಂದಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಬಾಲಕಿಯನ್ನು ರಕ್ಷಿಸಿದ್ದ ಮಕ್ಕಳ ಕಲ್ಯಾಣ ಸಮಿತಿ ಎರಡು ದಿನಗಳ ಕಾಲ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿರಿಸಿತ್ತು. ಬಳಿಕ ಶನಿವಾರ ಚಿಕ್ಕಮಗಳೂರು ನಗರದಲ್ಲಿನ ಸ್ವಾಧಾರ ಕೇಂದ್ರಕ್ಕೆ ಕಳಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ತಾಯಿ ನಿಧನವಾದ ನಂತರ ಚಿಕ್ಕಮ್ಮನ ಜೊತೆ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ವಾಸವಿದ್ದಳು. ಈ ಸಂದರ್ಭ ವ್ಯಕ್ತಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಇದನ್ನು ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಂಡಿದ್ದು ಅದನ್ನು ಆ ವ್ಯಕ್ತಿ ತನ್ನ ಸ್ನೇಹಿತರು, ಪರಿಚಿತರನ್ನು ಕಳಿಸಿ ಬಾಲಕಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರ ನಡೆಸಲು ಸಹಕರಿಸಿದ್ದ ಎಂದು ಹೇಳಲಾಗಿದೆ.

Comments are closed.