ಕರಾವಳಿ

ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಅಧಿಕೃತ ಆಹ್ವಾನ

Pinterest LinkedIn Tumblr

ಮಂಗಳೂರು :ಪಣಂಬೂರು ನಂದನೇಶ್ವರ ದೇವಳದ ಆವರಣದಲ್ಲಿ ಫೆ. 9ರಂದು ಜರಗಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ಹಿರಿಯ ವಿದ್ವಾಂಸ ಪೊಳಲಿ ನಿತ್ಯಾನಂದ ಕಾರಂತರಿಗೆ ಆಮಂತ್ರಣ ನೀಡುವ ಮೂಲಕ ಅಧಿಕೃತವಾಗಿ ಆಹ್ವಾನಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕಾಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ಕಾರ್ಯದರ್ಶಿ ಗಳಾದ ಡಾ. ಪದ್ಮನಾಭ ಭಟ್ ಎಕ್ಕಾರು ಮತ್ತು ಶ್ರೀಮತಿ ದೇವಕಿ ಅಚ್ಚುತ, ಹಾಗೂ ಕೋಶಾಧಿಕಾರಿಗಳಾದ ಪ್ರೊ. ಪಿ. ಕೃಷ್ಣಮೂರ್ತಿ, ಸುರತ್ಕಲ್ ಮೊದಲಾದವರು ಕಾರಂತರ ನಿವಾಸಕ್ಕೆ ತೆರಳಿ ಫಲವಸ್ತು, ಶಾಲು ಹೊದಿಸಿ ಆಮಂತ್ರಿಸಿದರು.

 

Comments are closed.