ಕರಾವಳಿ

ಕುಂದಾಪುರ ಚರ್ಚ್ ರಸ್ತೆಯಲ್ಲಿ ಬುಲೆಟ್ ಹಾಗೂ ಕಾರು ಅಪಘಾತ: ಯುವಕರಿಬ್ಬರು ದಾರುಣ ಸಾವು

Pinterest LinkedIn Tumblr

ಕುಂದಾಪುರ: ವೇಗವಾಗಿ ಬಂದ ಕಾರೊಂದು ಬುಲೆಟ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಫೆ.8ರಂದು ಸೋಮವಾರ ತಡರಾತ್ರಿ ಕುಂದಾಪುರ ಚರ್ಚ್ ರಸ್ತೆಯ ಬಳಿ ನಡೆದಿದೆ.

ಮೃತರನ್ನು ಕುಂದಾಪುರ ನೇರಳೆಕಟ್ಟೆ ಮೂಲದ ಬುಲೆಟ್ ಸವಾರ ಕಿರಣ್ ಮೇಸ್ತಾ(24) ಹಾಗೂ ಕುಂದಾಪುರ ಕರ್ಕುಂಜೆ ಗ್ರಾಮದವಾರಾದ ಹಿಂಬದಿ ಸವಾರ ರವೀಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಮಹಿಳೆಯೊಬ್ಬರು ತನ್ನ ಮಾರುತಿ ಅಲ್ಟೋ ಕಾರನ್ನು ಮದ್ದುಗುಡ್ಡೆ ಕಡೆಯಿಂದ ಕುಂದಾಪುರ ಕಡೆಗೆ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿಕೊಂಡು ಬಂದಿದ್ದು, ಕುಂದಾಪುರ ಕಡೆಯಿಂದ ಮದ್ದುಗುಡ್ಡೆ ಕಡೆಗೆ ಬರುತ್ತಿದ್ದ ಬುಲೆಟ್‌ಗೆ ಢಿಕ್ಕಿ ಕಾರು ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಇಬ್ಬರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Comments are closed.