ಕರಾವಳಿ

ಮಂಗಳೂರಿನ ಖ್ಯಾತ ಉದ್ಯಮಿ, ಕೊಡುಗೈ ದಾನಿ ಗಣೇಶ್ ಬಂಗೇರಾ ವಿಧಿವಶ

Pinterest LinkedIn Tumblr

ಮಂಗಳೂರು, ಫೆಬ್ರವರಿ.14 : ಮಂಗಳೂರಿನ ಖ್ಯಾತ ಉದ್ಯಮಿ, ಕೊಡುಗೈ ದಾನಿ, ಜಿಬಿ ಕನ್ ಸ್ಟ್ರಕ್ಷನ್ಸ್ ಮಾಲಕ ಗಣೇಶ್ ಬಂಗೇರಾ(62) ಅವರು ಇಂದು ನಸುಕಿನ ಜಾವ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಹಲವಾರು ಧಾರ್ಮಿಕ ಸಂಘಟನೆಗಳಲ್ಲಿ ಅಹರ್ನಿಶಿ ದುಡಿದಿದ್ದ ನಗರದ ಯೆಯ್ಯಾಡಿ ಗುರುನಗರ ನಿವಾಸಿ ಹಿರಿಯ ಉದ್ಯಮಿ ಗಣೇಶ್ ಬಂಗೇರಾ ವಿವಿಧ ಸಮಾಜಮುಖಿ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಕೊಡುಗೈ ದಾನಿಯಾಗಿ ಸಾಮಾಜಿಕ ಸಂಘಟನೆಗಳ ಮುಂದಾಳುವಾಗಿದ್ದ ಬಂಗೇರರು ಗೆಜ್ಜೆಗಿರಿ ಕ್ಷೇತ್ರವೂ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಎಲ್ಲರೊಂದಿಗೆ ಸ್ನೇಹಪರ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು.

ಅಲ್ಪಕಾಲದ ಅಸೌಖ್ಯಕ್ಕೆ ತುತ್ತಾಗಿದ್ದ ಅವರು ಇಂದು ನಸುಕಿನ ಜಾವ 2 ಗಂಟೆಗೆ ಹೃದಯಘಾತದಿಂದ ಮೃತರಾದರು.

Comments are closed.