ಕರಾವಳಿ

ಮಂಗಳೂರಿನ ಪ್ರತಿಷ್ಠಿತ ಉದ್ಯಮಿಗಳ ಮನೆ,ಕಚೇರಿಗಳ ಮೇಲೆಐಟಿ ದಾಳಿ:ದಾಖಲೆ ಪತ್ರ ಪರಿಶೀಲನೆ

Pinterest LinkedIn Tumblr

ಮಂಗಳೂರು, ಫೆಬ್ರವರಿ.17: ಮಂಗಳೂರಿನ ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳ ಮೇಲೆ ಬುಧವಾರ ಮುಂಜಾನೆ ಏಕಕಾಲಕ್ಕೆ ಐಟಿ ಅಧಿಕಾರಿಗಳತಂಡ ದಾಳಿ ನಡೆಸಿದ್ದಾರೆ.

ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭಿಸಿದೆ.

ಮಂಗಳೂರಿನಲ್ಲೂ ಪ್ರತಿಷ್ಟಿತ ಮೂರು ಖಾಸಗಿ ಆಸ್ಪತ್ರೆಗಳ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದ್ದು, ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮಂಗಳೂರಿನ ಎ.ಜೆ. ಆಸ್ಪತ್ರೆ, ಯೆನೆಪೊಯ ಮೆಡಿಕಲ್ ಕಾಲೇಜು, ದೇರಳಕಟ್ಟೆಯ ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ, ಶ್ರೀನಿವಾಸ ಕಾಲೇಜು ಆಸ್ಪತ್ರೆಗಳ ಮಾಲಕರ ಮನೆ, ಕಚೇರಿಗಳಿಗೆ ದಾಳಿ ‌ನಡೆಸಲಾಗಿದೆ.

ದಾಳಿ ಸಂದರ್ಭ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. 8 ಮಂದಿ ಅಧಿಕಾರಿಗಳ ತಂಡದಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Comments are closed.