ಕರಾವಳಿ

ಬೆಂಗಳೂರಿನಲ್ಲಿ ಇನೋವಾ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್​ ಡಿಕ್ಕಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಪಾಯದಿಂದ ಪಾರು

Pinterest LinkedIn Tumblr

ಬೆಂಗಳೂರು: ಬಿಡದಿ ಬಳಿಯಿರುವ ಕದಂಬ ಹೋಟೆಲ್ ಮುಂಭಾಗದಲ್ಲಿ ರಸ್ತೆ​​ ಕ್ರಾಸ್​ ಮಾಡುವಾಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಇನೋವಾ ಕ್ರಿಸ್ಟಾ ಕಾರಿಗೆ ಕೆಎಸ್ಆರ್ಟಿಸಿ ಬಸ್​ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಅಪಘಾತದಲ್ಲಿ ಸಚಿವರು ಸೇರಿ ಯಾರಿಗೂ ಅಪಾಯವಾಗಿಲ್ಲ. ಸಚಿವ ಪೂಜಾರಿ ತಮ್ಮ ವಾಹನಕ್ಕೆ ಇಂಧನ ಹಾಕಿಸಿಕೊಂಡು ತೆರಳುವಾಗ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಕಾರಿನ‌ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ.

ಸಚಿವರು ಬೆಂಗಳೂರಿನಲ್ಲಿ ವಿವಿಧ ಸರಕಾರಿ ಕಾರ್ಯಕ್ರಮಗಳನ್ನು ಮುಗಿಸಿ ಇಂದು ಸಂಜೆ ವೇಳೆ ಮಂಗಳೂರಿಗೆ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದರು.

Comments are closed.