ಕರಾವಳಿ

ಫೆ.22ರಿಂದ 24ರ ತನಕ ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ಗೆ ನೋಂದಣಿ ಶಿಬಿರ

Pinterest LinkedIn Tumblr

ಮಂಗಳೂರು, ಫೆಬ್ರವರಿ.21: ಪತ್ರಕರ್ತರು ಮತ್ತು ಅವರ ಕುಟುಂಬದವರ ಅನುಕೂಲಕ್ಕಾಗಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ‌ಗೆ ನೋಂದಣಿ ಶಿಬಿರವನ್ನು ಫೆ.22ರಿಂದ 24ರ ತನಕ ಲೇಡಿಹಿಲ್ ನಲ್ಲಿರುವ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ.

ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ , ಜಿಲ್ಲಾ .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸರಕಾರದ ಮಾನ್ಯತೆ ಪಡೆದ ಪತ್ರಕರ್ತರು ಮಾನ್ಯತಾ ಪತ್ರದ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ,ಮಾನ್ಯತೆರಹಿತ ಪತ್ರಕರ್ತರು,ಪತ್ರಿಕೆ ಮತ್ತು ವಿವಿಧ ಚಾನೆಲ್ ಗಳ ಕಚೇರಿ ಸಿಬ್ಬಂದಿವರ್ಗ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ಹಾಜರುಪಡಿಸಿ (ಬೆಳಿಗ್ಗೆ 10:00 ರಿಂದ ಸಂಜೆ 5:00ರ ತನಕ) ಆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ಸೌಲಭ್ಯಕ್ಕಾಗಿ ನೋಂದಣಿ ಮಾಡಿಸಬಹುದಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.