ಕರಾವಳಿ

ನಾಳೆ ಮಂಗಳೂರಿನಲ್ಲಿ “ರಾಷ್ಟ್ರೀಯ ಜಾದೂ ದಿನಾಚರಣೆ”

Pinterest LinkedIn Tumblr

ಮಂಗಳೂರು – ವಿಸ್ಮಯ ಜಾದೂ ಪ್ರತಿಷ್ಠಾನ ಮಂಗಳೂರು ಹಾಗೂ ರಾಮಕೃಷ್ಣ ಮಠ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 23 ರಂದು “ರಾಷ್ಟ್ರೀಯ ಜಾದೂ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.

ಭಾರತೀಯ ಜಾದೂ ರಂಗದ ಪಿತಾಮಹರೆಂದು ಪರಿಗಣಿಸಲಾಗುವ ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ವಿಶ್ವ ಪ್ರಸಿದ್ದ ಜಾದೂಗಾರ ಪಿ. ಸಿ. ಸರ್ಕಾರ್ ಇವರ 109 ನೇ ಜನ್ಮ ದಿನದ ನೆನಪಿಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕ್ರಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿಸಂಜೆ 6 ಗಂಟೆಗೆ ಸಮಾರಂಭ ನಡೆಯಲಿದೆ.

ರಾಮಕ್ರಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಇವರ ದಿವ್ಯ ಉಪಸ್ಥಿತಿ ಯಲ್ಲಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಕೆ ಇವರು ರಾಷ್ಟ್ರಿಯ ಜಾದೂ ದಿನಾಚರಣೆ ಯನ್ನು ಉದ್ಘಾಟಿಸಲಿದ್ದಾರೆ.

ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ನಿಕ್,ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ದಕ್ಷಿಣ ಕನ್ನಡ ವಿಭಾಗದ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಬಿ, ಮಾಜಿ ಮೇಯರ್ ಶ್ರೀ ದಿವಾಕರ್ ಕದ್ರಿ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ವಿಸ್ಮಯ ಜಾದೂ ಪ್ರತಿಷ್ಠಾನದ ವತಿಯಿಂದ ಜಾದೂ ರಂಗದ ಸಾಧಕರಿಗೆ ಕೊಡ ಮಾಡುವ 2021 ನೇ ಸಾಲಿನ “ಐಂದ್ರಜಾಲಿಕ ಪ್ರಶಸ್ತಿ” ಯನ್ನು ಹಿರಿಯ ಜಾದೂಗಾರರಾದ ಕಾಸರಗೋಡಿನ ಪ್ರೊಫೆಸರ್ ಮಾಧವ ಇವರಿಗೆ ನೀಡಿ ಗೌರವಿಸಲಾಗುವುದು.

ಪ್ರಸಿದ್ದ ಜಾದೂಗಾರರಾದ ಕುದ್ರೋಳಿ ಗಣೇಶ್, ಸತೀಶ್ ಹೆಮ್ಮಾಡಿ, ರಾಜೇಶ್ ಮಳಿ, ಯುವ ಜಾದೂಗಾರ ಸೂರಜ್ ಚೌಟ, ಕಿರಿಯ ವಯಸ್ಸಿನಲ್ಲಿ ದಾಖಲೆ ನಿರ್ಮಿಸಿದ ಅಂಜನಾ ಮತ್ತು ಅಪೂರ್ವ ಮಳಿ ಇವರಿಂದ ಜಾದೂ ಪ್ರದರ್ಶನ ನಡೆಯಲಿದೆ ಎಂದು ವಿಸ್ಮಯ ಜಾದೂ ಪ್ರತಿಷ್ಠಾದ ಸಂಚಾಲಕರಾದ ಕುದ್ರೋಳಿ ಗಣೇಶ್ ಇವರು ತಿಳಿಸಿದ್ದಾರೆ.

Comments are closed.