ಕರಾವಳಿ

ಯುವಜನರಲ್ಲಿ ಇರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ : ಸಚಿವ ಡಾ. ನಾರಾಯಣಗೌಡ

Pinterest LinkedIn Tumblr

ಮಂಗಳೂರು, ಫೆಬ್ರವರಿ 27 : ಯುವಜನರಲ್ಲಿಇರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸು ವುದರೊಂದಿಗೆ ಅವರಲ್ಲಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುವ ಕಾರ್ಯವನ್ನು ಮಾಡಬೇಕು ಎಂದು ಯುವ ಸಬಲೀಕರಣ ಮತ್ತುಕ್ರೀಡೆ ಹಾಗೂ ಯೋಜನೆಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣಗೌಡ ತಿಳಿಸಿದರು.

ಅವರು  ನಗರದಓಷಿಯನ್ ಪರ್ಲ್ ಹೊಟೇಲ್‍ನಲ್ಲಿ ನಡೆದ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರಾದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಕ್ರೀಡಾಇಲಾಖೆಯ ಕ್ರೀಡಾಕಿಟ್ ವಿತರಣೆ ಮಾಡಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿತೆರೆಯ ಮರೆಯಲ್ಲಿಅಡಗಿರುವಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರುಜಾರಿಗೆತಂದಿರುವ ಮಹತ್ವಾಕಾಂಕ್ಷೆ ಯೋಜನಗಳಲ್ಲಿ ಒಂದಾದ ಖೇಲೋ ಇಂಡಿಯಾಯೋಜನೆಗೆ ಹೆಚ್ಚು ಒತ್ತುಕೊಡುವುದು ನಮ್ಮೆಲ್ಲರಜವಬ್ದಾರಿಯಾಗಿದೆಎಂದರು.

ಸ್ಪರ್ಧಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ವಿಶ್ವಕ್ಕೆತೋರಿಸಲು ಖೇಲೋ ಇಂಡಿಯಾಗೇಮ್‍ಒಂದುಉತ್ತಮ ವೇದಿಕೆಯಾಗಿದೆ.ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದಅವರು, ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವಕರ ಪ್ರತಿಭೆಯನ್ನು ಹೊರತರುವ ಕೆಲಸ ಮಾಡಬೇಕು.ಕೇವಲ ತಾಲೂಕು ಮಟ್ಟದಲ್ಲಿ ಅಲ್ಲದೇ, ಗ್ರಾಮೀಣ ಭಾಗದಯುವಕರಿಗೆ ಶಕ್ತಿ ತುಂಬುವಕಾರ್ಯವಾಗಬೇಕುಎಂದರು.

ಕರಾವಳಿ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ 3 ಜಿಲ್ಲೆಯ 9 ತಾಲೂಕುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸ್ಥಳೀಯ ಸಮಸ್ಯೆಗಳಿಗನುಗುಣವಾಗಿ ಯೋಜನೆಗಳಿಗೆ ಅಗತ್ಯಅನುದಾನವನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದುಎಂದರು.

ಶಾಸಕ ವೇದವ್ಯಾಸ್ ಮಾತನಾಡಿ, ಕರಾವಳಿ ಭಾಗದಲ್ಲಿ ಹಲವಾರುಯುವಕರುರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳು ಇದ್ದಾರೆ.ಅವರನ್ನು ಗುರುತಿಸಿ ಅವರಿಗೆ ಸಮಾಜದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಉದ್ಯೊಗ ಅವಕಾಶ ನೀಡಬೇಕು ಎಂದ ಅವರು, ಅಂತಹ ಯುವಕರಿಗೆ ಕಡ್ಡಾಯವಾಗಿ ಉದ್ಯೋಗ ಕಲ್ಪಿಸುವಂತಹ ಯೋಜನೆಯನ್ನುಕರ್ನಾಟಕ ಸರ್ಕಾರ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರಅಧ್ಯಕ್ಷರಾದ ಮಟ್ಟಾರ್‍ರತ್ನಾಕರ ಹೆಗ್ಗಡೆ, ಮಂಗಳೂರು ನಗರದಕ್ಷಿಣ ಶಾಸಕರಾದ ವೇದವ್ಯಾಸ್‍ಕಾಮತ್, ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಮಹಾನಗರ ಪಾಲಿಕೆಯ ಉಪಮೇಯರ್ ವೇದಾವತಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ, ಕೆ.ಎಫ್.ಡಿ.ಸಿ ಅಧ್ಯಕ್ಷ ನಿತಿನ್‍ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.