ಕರಾವಳಿ

ಮದುವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗಳು ಮೃತ್ಯು 

Pinterest LinkedIn Tumblr

(ಸಾಂದರ್ಭಿಕ ಚಿತ್ರ)

ಮಂಗಳೂರು, ಮಾರ್ಚ್ 01 : ನಿನ್ನೆ ಮದುವೆ ಇವತ್ತು ಸಾವು. ವಿಧಿಯ ಲಿಲೆಯನ್ನು ಬಲ್ಲವರು ಯಾರು. ಇಂತಹ ಒಂದು ನೋವಿನ ಘಟನೆ ನಗರದ ಹೊರವಲಯದ ಅಡ್ಯಾರ್ ನಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ದಾಂಪತ್ಯ ಜೀವನ ಪ್ರವೇಶಿಸಿ ಕೆಲವೇ ಗಂಟೆಗಳ ಬಳಿಕ ಮದುಮಗಳು ಹೃದಯಾಘಾತದಿಂದ ಮೃತಪಟ್ಟಿದ್ದು, ಸಂತಸ, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ದುಃಖ ಮಡುಗಟ್ಟಿದೆ.

ಅಡ್ಯಾರ್ ಕಣ್ಣೂರು ಸಮೀಪದ ಬೀರ್ಪುಗುಡ್ಡೆ ಜಮಾಅತ್ ಅಧ್ಯಕ್ಷ ಕೆಎಚ್‌ಕೆ ಅಬ್ದುಲ್ ಕರೀಂ ಹಾಜಿ ಎಂಬವರ ಪುತ್ರಿ ಲೈಲಾ ಆಫಿಯಾ(23) ಸೋಮವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.

ಆಫಿಯಾ ಅವರ ವಿವಾಹವೂ ಭಾನುವಾರ ಕಣ್ಣೂರಿನ ಯುವಕ ಮುಬಾರಕ್ ಎಂಬವರೊಂದಿಗೆ ಅಡ್ಯಾರ್ ಕಣ್ಣೂರು ಜುಮಾ ಮಸೀದಿಯಲ್ಲಿ ನೆರವೇರಿತ್ತು. ಆ ಬಳಿಕ ವಿವಾಹದ ಔತಣಕೂಟವೂ ಅಡ್ಯಾರ್ ಗಾರ್ಡನ್‌ನಲ್ಲಿ ಏರ್ಪಡಿಸಲಾಗಿತ್ತು.

ಆ ಬಳಿಕ ಮದುಮಗ ಮುಬಾರಕ್ ಅತ್ತೆಯ ಮನೆಗೆ ಆಗಮಿಸಿದ್ದರು. ನವಜೋಡಿಯು ಅತ್ಯಂತ ಲವಲವಿಕೆಯಿಂದಿತ್ತು. ಸೋಮವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಲೈಲಾ ಆಫಿಯಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Comments are closed.