ಕರಾವಳಿ

ಮಾ. 7ರಂದು ಬಂಟರ ಮಾತೃ ಸಂಘದಿಂದ ಗ್ರಾ.ಪಂ ಸದಸ್ಯರಿಗೆ ಅಭಿನಂದನೆ ಕಾರ್ಯಕ್ರಮ

Pinterest LinkedIn Tumblr

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ(ರಿ) ಬಂಟ್ಸ್ ಹಾಸ್ಟೆಲ್ ಇದರ ಆಶ್ರಯ ದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ನೂತನ ಜನಪ್ರತಿನಿಧಿಗಳಾಗಿ ಆಯ್ಕೆಯಾದ ಬಂಟ ಸಮಾಜದ ಬಾಂಧವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಮಾರ್ಚ್ 7ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಹಾಸ್ಟೇಲ್ ಬಳಿಯ ಶ್ರೀ ರಾಮಕೃಷ್ಣ ವಿದ್ಯಾ ಸಂಸ್ಥೆಗಳ ವಠಾರದಲ್ಲಿ ಜರಗಲಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ದಿಕ್ಸೂಚಿ ಭಾಷಣವನ್ನು ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಾಜೀ ಶಾಸಕಿ ಶಕುಂತಲ ಟಿ. ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿ ದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ.

ಗ್ರಾಮ ಪಂಚಾಯತ್‌ಗಳು ದೇಶದ ಬೆಳವಣಿಗೆಯಲ್ಲಿ ಅಗತ್ಯ ಪಾತ್ರವನ್ನು ವಹಿಸುತ್ತಿರುವ ಈ ಸಂದರ್ಭದಲ್ಲಿ ಮುತುವರ್ಜಿ, ಉಲ್ಲಾಸ, ಪ್ರೇರಣೆ ಮತ್ತು ಗ್ರಾಮ ಪಂಚಾಯತ್‌ಗಳ ಮತ್ತು ಸದಸ್ಯರ ಜವಾಬ್ದಾರಿಯನ್ನು ಮನವರಿಕೆ ಮಾಡಿ ಕೊಡುವ ಹಾಗೂ ಮಾರ್ಗದರ್ಶನ ನೀಡುವ ಸದುದ್ದೇಶ ದಿಂದ ಈ ಕಾರ್ಯ ಕ್ರಮವನ್ನು ಆಯೋಜಿ ಸಲಾಗಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕರು ತಿಳಿಸಿದ್ದಾರೆ.

Comments are closed.