ಮಂಗಳೂರು : ಮಂಗಳೂರು ಮೀನುಗಾರಿಕಾ ಕಾಲೇಜನ್ನು ಮೀನುಗಾರಿಕಾ ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸಲು ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಮನವಿಯನ್ನು ಸಲ್ಲಿಸಿದರು.
ಕಾಲೇಜನ್ನು ಮೀನುಗಾರಿಕಾ ವಿಶ್ವವಿದ್ಯಾನಿಲಯವಾಗಿ ಪರಿವರ್ತಿಸಿದರೆ ಸ್ಥಳೀಯ ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗುವುದು ಎಂದು ಸಚಿವರು ತಿಳಿಸಿದರು.
Comments are closed.