ಕರಾವಳಿ

ಪೊಲೀಸರಿಂದ ಆರೋಪಿಗಳ ಐಷಾರಾಮಿ ಕಾರು ಮಾರಾಟ ಪ್ರಕರಣ: ಸಿಐಡಿ ತನಿಖಾಧಿಕಾರಿ ಬದಲು

Pinterest LinkedIn Tumblr

ಮಂಗಳೂರು, ಮಾರ್ಚ್.10: ವಂಚನೆ ಪ್ರಕರಣದ ಆರೋಪಿಗಳ ಐಷಾರಾಮಿ ಕಾರುಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮಾರಾಟ ಮಾಡಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯನ್ನು ಬದಲಾಯಿಸಲಾಗಿದೆ.

ಐಷಾರಾಮಿ ಕಾರು ಮಾರಾಟದ ತನಿಖೆಯನ್ನು ಸಿಐಡಿ ಎಸ್ಪಿ ಹಂತದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.ಸಿಐಡಿ ಇನ್‌ಸ್ಪೆಕ್ಟರ್ ಈವರೆಗೆ ಪ್ರಕರಣದ ತನಿಖೆ ನಡೆಸುತ್ತಿದ್ದರು. ಈ ತನಿಖೆ ಹಾದಿ ತಪ್ಪುತ್ತಿರುವ ಶಂಕೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ಬಾಕಿ ಉಳಿದ ತನಿಖೆಯನ್ನು ಇನ್‌ಸ್ಪೆಕ್ಟರ್ ಬದಲು ಎಸ್ಪಿ ಹಂತದ ಅಧಿಕಾರಿಗೆ ವರ್ಗಾಯಿಸಲಾಗಿದೆ. ಸಿಐಡಿ ಎಸ್ಪಿ ರಮೇಶ್ ಎಂಬವರು ಮಂಗಳೂರಿಗೆ ಆಗಮಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಸಿಐಡಿ ರೋಹಿಣಿ ಕಟ್ಟೋಚ್ ಅವರ ಬದಲು ಎಸ್ಪಿ ರಮೇಶ್ ಅವರನ್ನು ಸಮಗ್ರ ತನಿಖೆ ನಡೆಸುವಂತೆ ಮಂಗಳೂರಿಗೆ ಸಿಐಡಿ ಉನ್ನತಾಧಿಕಾರಿಗಳು ಕಳುಹಿಕೊಟ್ಟಿದ್ದರು. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಅಮಾನತುಗೊಂಡ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಮಾರಾಟ ಮಾಡಲು ನೆರವಾದ ಮದ್ಯವರ್ತಿಗೆ ನೋಟಿಸ್ ನೀಡಿದ್ದು, ವಿಚಾರಣೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.