ಕರಾವಳಿ

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಕೇರಳದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ

Pinterest LinkedIn Tumblr

ಮಂಗಳೂರು / ತ್ರಿಶೂರ್ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ತ್ರಿಶೂರ್ ಜಿಲ್ಲೆಯ ನೆಟ್ಟಿಕಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ತಯಾರಿ ಹಾಗೂ ಸಿದ್ಧತೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದರೆ ಕೇರಳ ಮತೀಯವಾದ ಹಾಗೂ ಆಡಳಿತ ನಡೆಸಿದ ಪಕ್ಷಗಳ ತುಷ್ಟೀಕರಣ ನೀತಿಯಿಂದ ಅಭಿವೃದ್ಧಿ ವಂಚಿತವಾಗಿದೆ‌. ಕೇರಳದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಆಡಳಿತ ಪಕ್ಷಕ್ಕೆ ಜನರ ಸಂಕಷ್ಟಕ್ಕಿಂತ ಆರೋಪಿಗಳ ಸುರಕ್ಷೆಯೇ ಮುಖ್ಯವಾಗಿದೆ. ಕೇರಳದ ಮಹಾಜನತೆ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಯನ್ನು ಚುನಾಯಿಸಿ, ನವ ಕೇರಳವನ್ನಾಗಿಸಲು ಅವಕಾಶ ಮಾಡಿಕೊಡುವ ಭರವಸೆಯಿದೆ ಎಂದರು.

Comments are closed.