ಮಂಗಳೂರು, ಮಾರ್ಚ್.31: ಮಂಗಳೂರಿನ ಕಾವೂರು ಸಮೀಪದ ಮರಕಡ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೋರ್ವಳು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಕಾವುರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಚೆಲ್ಲಯ್ಯ ಎಂಬವರ ಪುತ್ರಿ, ಸಿ.ಪವಿತ್ರ (21) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವತಿ. ಈಕೆ ಮಂಗಳೂರು ವಿ.ವಿಯ ಪ್ರಥಮ ಎಂ.ಕಾಂ ವಿದ್ಯಾರ್ಥಿನಿಯಾಗಿದ್ದಾಳೆ.
ಪವಿತ್ರ ಮರಕಡ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 9 ಗಂಟೆಯ ವೇಳೆಗೆ ಪವಿತ್ರ ರಸ್ತೆ ದಾಟುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗಾ ಬಸ್ಸು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ವೇಳೆ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಂಗಳೂರು ಸಂಚಾರ ಉತ್ತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.
Comments are closed.