ಕರಾವಳಿ

ಉಳ್ಳಾಲ: ಕೊಲೆಯಾದ ಸ್ಥಿತಿಯಲ್ಲಿ12 ವರ್ಷದ ಬಾಲಕನ ಶವ ಪತ್ತೆ – ಪಬ್‌ಜಿ ಆಟದ ವಿಚಾರದಲ್ಲಿ ಗಲಾಟೆ ಶಂಕೆ?

Pinterest LinkedIn Tumblr

ಮಂಗಳೂರು, ಎಪ್ರಿಲ್.04 : ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆ.ಸಿ. ರೋಡ್‌ ಬಳಿ 12 ವರ್ಷದ ಬಾಲಕನ ಶವವು ಕೊಲೆಯಾದ ಸ್ಥಿತಿಯಲ್ಲಿ ಇಂದು ಮುಂಜಾನೆ ಪತ್ತೆಯಾಗಿದೆ.

ಮೃತ ಬಾಲಕನನ್ನು ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಆಕೀಫ್ (12) ಎಂದು ಗುರುತಿಸಲಾಗಿದೆ. ಈತ ಫನಾಹ್ ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದ.

ಬಾಲಕ ಏಪ್ರಿಲ್ 3ರ ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದ್ದು, ಆತಂಕಕ್ಕೊಳಗಾದ ಅವರ ಪೋಷಕರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಕೀಬ್‌ ಕಾಣಿಯಾದ ಬಗ್ಗೆ ದೂರು ದಾಖಲಿಸಿದ್ದರು.

ಪಬ್‌ಜಿ ಆಟದ ಬಗ್ಗೆ ಆತ ತನ್ನ ಸ್ನೇಹಿತರೊಂದಿಗೆ ಜಗಳವಾಡಿದ್ದ ಎಂದು ಶಂಕಿಸಲಾಗಿದೆ. ಕಳೆದ ವರ್ಷ ಈ ಆಟವನ್ನು ಕೇಂದ್ರ ಸರ್ಕಾರವು ನಿಷೇಧಿಸಿತ್ತು, ಆದಾಗ್ಯೂ, ಮೂಲಗಳ ಪ್ರಕಾರ, ಕೆಲವು ಲೋಪದೋಷಗಳಿಂದಾಗಿ ಈಗಲೂ ಕೂಡಾ ಈ ಆಟ ಆಡಬಹುದಾಗಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ.

ಬಾಲಕನ ದೇಹವು ಏಪ್ರಿಲ್ 4 ರ ಭಾನುವಾರ ಮುಂಜಾನೆ ಮನೆಯಿಂದ ಸುಮಾರು 3 ಕಿ.ಮೀ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಕಲ್ಲಿನಿಂದ ಒಡೆದು ಹತ್ಯೆಗೈಯಲಾಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Comments are closed.