ಕರಾವಳಿ

ಎಪ್ರಿಲ್ 10 : ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ

Pinterest LinkedIn Tumblr

ಮಂಗಳೂರು, ಎಪ್ರಿಲ್ 08 : ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವವನ್ನು ಎಪ್ರಿಲ್ 10 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಇನ್ಫೋಸಿಸ್ ಫೌಂಡೇಶನ್‍ನ ಅಧ್ಯಕ್ಷೆ ಡಾ. ಸುಧಾ ಮೂರ್ತಿ ಮುಖ್ಯ ಘಟಿಕೋತ್ಸವ ಭಾಷಣವನ್ನು ಆನ್ ಲೈನ್ ಮುಖಾಂತರ ಮಾಡಲಿರುವರು.

ರಾಜ್ಯಪಾಲರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಾಜುಭಾಯಿ ರೂಡಾಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದು, ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಇವರು ಉಪಸ್ಥಿತರಿರುವರು.

Comments are closed.