ಕರಾವಳಿ

ಎಪ್ರಿಲ್.14: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆ -ಕಾರ್ಯಕ್ರಮಗಳ ವಿವರ

Pinterest LinkedIn Tumblr

ಮಂಗಳೂರು,ಎಪ್ರಿಲ್ 09 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರಪಾಲಿಕೆ ಹಾಗೂ ಸಮಾಜಕಲ್ಯಾಣ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್.ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಕಾರ್ಯಕ್ರಮವು ಎಪ್ರಿಲ್ 14 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರುವರು. ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‍ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ.ಖಾದರ್, ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್‍ ಯು, ಸಂಜೀವ ಮಠಂದೂರು, ಉಮಾನಾಥ್ ಎ. ಕೋಟ್ಯಾನ್, ವಿಧಾನ ಪರಿಷತ್‍ನ ಶಾಸಕರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಬಿ.ಎಂ.ಫಾರೂಕ್, ಕೆ. ಹರೀಶ್‍ಕುಮಾರ್, ಆಯನೂರು ಮಂಜುನಾಥ, ಎಸ್. ಎಲ್. ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ.,  ಕರ್ನಾಟಕ ಮೀನುಗಾರಿಕೆಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಿತಿನ್‍ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್, ಬೆಂಗಳೂರು ಇದರ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ,ಉಪ ಮಹಾಪೌರರಾದ ಸುಮಂಗಳ ರಾವ್, ಜಿಲ್ಲಾ ಪಂಚಾಯತ್‍ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯತ್‍ ಅಧ್ಯಕ್ಷ ಮೊಹಮ್ಮದ್ ಮೋನು, ತಾಲೂಕು ಪಂಚಾಯತ್‍ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್ ಪೂಜಾರಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸುರತ್ಕಲ್‍ ಗೋವಿಂದದಾಸ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ರಾದ ಡಾ. ಆಶಾಲತಾ ಪಿ.ಉಪನ್ಯಾಸ ನೀಡಲಿದ್ದಾರೆ.

Comments are closed.