ಕರಾವಳಿ

ಧಾರ್ಮಿಕ ಕಾರ್ಯಕ್ರಮಗಳಿಗೆ ರಾತ್ರಿ ಕರ್ಫ್ಯೂವಿನಿಂದ ವಿನಾಯಿತಿ ಕೋರಿ ಪೊಲೀಸ್ ಕಮಿಷನರ್‌ಗೆ ಮನವಿ

Pinterest LinkedIn Tumblr

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ ಕರ್ಫ್ಯೂವಿನಿಂದ ವಿನಾಯಿತಿ ನೀಡುವಂತೆ ವಿಶ್ವ ಹಿಂದು ಪರಿಷದ್ ವತಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ಮನವಿ ಸಲ್ಲಿಸಲಾಯಿತು.

ಕೋವಿಡ್ ಕಾರಣ ಕರ್ನಾಟಕ ರಾಜ್ಯ ಸರಕಾರ ಹೊರಡಿಸಿರುವ ಆದೇಶದಂತೆ ರಾತ್ರಿ ಕರ್ಫ್ಯೂ ವಿನಿಂದ ಧಾರ್ಮಿಕ ಕಾರ್ಯಕ್ರಮಗಳಾದ ಕೋಲ, ನೇಮ, ಜಾತ್ರೆ, ಬ್ರಹ್ಮಕಲಶ, ಜಾತ್ರೆ, ಯಕ್ಶಗಾನಗಳಿಗೆ ಯಾವುದೇ ತೊಂದರೆಯಾಗದಂತೆ ನಡೆಸಲು ಅವಕಾಶ ಕೊಡಬೇಕೆಂದು ಪೊಲೀಸ್ ಕಮಿಷನರ್ ನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಶಾಸಕರಾದ ವೇಧವ್ಯಾಸ ಕಾಮತ್ , ಭರತ್ ಶೆಟ್ಟಿ , ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಹಾಗೂ ಮತ್ತಿತ್ತರ ಮುಖಂಡರು ಉಪಸ್ಥಿತರಿದ್ದರು.

Comments are closed.