ಕರಾವಳಿ

ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆ : ಮಂಗಳೂರಿನ ದೀಪಾ ಕೆ.ಎಸ್‌ಗೆ ಚಿನ್ನದ ಪದಕ

Pinterest LinkedIn Tumblr

ಮಂಗಳೂರು: ಕರ್ನಾಟಕ ಪವರ್‌ ಲಿಫ್ಟಿಂಗ್ ಅಸೋಸಿಯೇಷನ್‌ ಸಹಯೋಗದಲ್ಲಿ ದಾವಣಗೆರೆಯ ಗ್ರೂಪ್‌ ಆಫ್‌ ಐರನ್‌ ಗೇಮ್ಸ್‌ ಸಂಸ್ಥೆಯು ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ದೀಪಾ ಕೆ. ಎಸ್. ಮಾಸ್ಟರ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ಅವರು‌ ಮಹಿಳೆಯರ ಮುಕ್ತ ವಿಭಾಗ (69ಕಿಲೊ)ದಲ್ಲಿಯೂ ಬೆಳ್ಳಿಯ ಪದಕ ಗೆದ್ದಿದ್ದಾರೆ. ಕೋಚ್ ಪ್ರದೀಪ್ ಕುಮಾರ್ ಆಚಾರ್ಯ ಅವರಿಂದ ತರಬೇತಿ ಪಡೆದಿದ್ದರು. ಇವರು ಉದ್ಯಮಿ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ ಅವರ ಪತ್ನಿ. ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಎರಡು ಚಿನ್ನದ ಪದಕ ಗೆದ್ದ ಋತ್ವಿಕ್ ಅಲೆವೂರಾಯ ಅವರ ತಾಯಿ.‌

Comments are closed.