ಕರಾವಳಿ

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

Pinterest LinkedIn Tumblr

ಮಂಗಳೂರು, ಎಪ್ರಿಲ್ 16 : ಬಂಟ್ವಾಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಕಳ್ಳಿಗೆ, ಸಜೀಪಮೂಡ, ಬಾಳೆಪುಣಿ, ತುಂಬೆ, ಕುರ್ನಾಡು, ಫಜೀರು, ಸಜಿಪಪಡು, ಪಂಜಿಕಲ್ಲು, ಗೋಳ್ತಮಜಲು ಗ್ರಾಮ ಪಂಚಾಯತ್‍ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನರು ಅರ್ಜಿಸಲ್ಲಿಸಲು ಎಪ್ರಿಲ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬಂಟ್ವಾಳ ಕೈಕುಂಜೆ ಬಿ.ಸಿ ರೋಡ್ ದೂ.ಸಂ: 08255-238080ನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.