
ಮಂಗಳೂರು ಮೇ 13 : ಹವಾಮಾನ ಕೇಂದ್ರ ತಿರುವನಂತಪುರಂ ಇವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ 12 ರಿಂದ ಮೇ 15 ರವರೆಗೆ ಕರ್ನಾಟಕ,ಕೇರಳ ಮತ್ತು ಲಕ್ಷ ದ್ವೀಪಾ ಕರಾವಳಿಯಲ್ಲಿ ರಭಸವಾದ ಗಾಳಿಯಿಂದ ಸಮುದ್ರವು ಪ್ರಕ್ಷುಬ್ಧವಾಗುವ ಸಾದ್ಯತೆ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚಿಸಿರುತ್ತಾರೆ.
ಈ ಹಿನ್ನಲೆಯಲ್ಲಿ ಮೀನುಗಾರರುಸಮುದ್ರಕ್ಕಿಳಿಯದಂತೆ ಹಾಗೂ ಮೀನುಗಾರರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಮೇ 14 ರಾತ್ರಿಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಮುನ್ನೇಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.