ಕರಾವಳಿ

ಉಡುಪಿ ಜಿಲ್ಲೆಯಲ್ಲೂ ‘ತೌಖ್ತೆ’ ಚಂಡಮಾರುತದ ಅಬ್ಬರ: ಗಾಳಿ ಸಹಿತ ಉತ್ತಮ ಮಳೆ

Pinterest LinkedIn Tumblr

ಉಡುಪಿ: ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ (ತೌಖ್ತೆ) ಪರಿವರ್ತನೆಯಾಗಿದ್ದು, ಶನಿವಾರ ಮುಂಜಾನೆಯಿಂದ ಕರಾವಳಿ ಜಿಲ್ಲೆಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ.

ಜಿಲ್ಲೆಯ ಕೆಲವೆಡೆ ಶುಕ್ರವಾರ ರಾತ್ರಿಯೇ ಮಳೆ ಆರಂಭಗೊಂಡಿದ್ದು, ಶನಿವಾರವೂ ಮುಂದುವರೆದಿದೆ. ಮಳೆಯ ಜೊತೆ ಗಾಳಿ ಕೂಡ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದೆ. ಬೈಂದೂರು ಭಾಗದಲ್ಲಿ ಕಡಲ್ಕೊರೆತವಾದ ಬಗ್ಗೆ ವರದಿಯಾಗಿದೆ. ಚಂಡಮಾರುತದ ಪರಿಣಾಮ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

 

Comments are closed.