ಕರಾವಳಿ

ಕೋವಿಡ್ ನಿಯಮ ಪಾಲಿಸಿಕೊಂಡು ಪಡಿತರ ವಿತರಣೆ : ಯಾವ ಕಾರ್ಡ್‌ಗೆ ಎಷ್ಟು ರೇಷನ್ -ಇಲ್ಲಿದೆ ವಿವರ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ.

ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ 2021 ರ ಮೇ ಮಾಹೆಗೆ NFSA ಅಡಿಯಲ್ಲಿ 5825.665 ಎಂ.ಟಿ. ಅಕ್ಕಿ, PMGKAY ಅಡಿಯಲ್ಲಿ 5608.645 ಎಂ.ಟಿ ಅಕ್ಕಿ, 501.696 ಎಂ.ಟಿ.ಗೋಧಿ ಹಾಗೂ 170 ಎಂ.ಟಿ ಆದ್ಯತೇತರ ಪಡಿತರ ಚೀಟಿ ಅಕ್ಕಿಯು ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ.
ಈ ಕೆಳಕಂಡ ಪ್ರಮಾಣದಲ್ಲಿ ಒಟ್ಟು ಪಡಿತರವನ್ನು ಪಡೆಯಬಹುದಾಗಿರುತ್ತದೆ.
ಅಂತ್ಯೋದಯ ಪಡಿತರ ಚೀಟಿಗೆ: ಉಚಿತ-35 ಕೆ.ಜಿ ಅಕ್ಕಿ ಜೊತೆಗೆ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ವಿತರಿಸಲಾಗುವುದು.
ಆದ್ಯತಾ (ಬಿ.ಪಿ.ಎಲ್) ಪಡಿತರಚೀಟಿಗೆ: ಉಚಿತ-ಪ್ರತಿ ಸದಸ್ಯನಿಗೆ 10 ಕೆ.ಜಿಅಕ್ಕಿ ಜೊತೆಗೆ ಪ್ರತಿಕಾರ್ಡಿಗೆ 2 ಕೆ.ಜಿಗೋಧಿ ವಿತರಿಸಲಾವುದು.
ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿಗೆ ಕೆ.ಜಿ.ಗೆ ರೂ.15 ರದರದಲ್ಲಿ ಏಕ ಸದಸ್ಯನಿಗೆ 5 ಕೆ.ಜಿ ಹಾಗೂ ಬಹುಸದಸ್ಯ ಪಡಿತರ ಚೀಟಿಗೆ 10ಕೆ.ಜಿ ಪಡಿತರ ಅಕ್ಕಿ ವಿತರಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.