ಕರಾವಳಿ

ಬಿಪಿಎಲ್ ಕಾರ್ಡ್ ಹೊಂದಿರುವ ಹಣವಂತರು ಜೂನ್ 30 ರೊಳಗೆ ಹಿಂದುರಿಗಿಸುವಂತೆ ಸೂಚನೆ : ತಪ್ಪಿದರೆ ದಂಡ-ಕಾನೂನು ಕ್ರಮದ ಎಚ್ಚರಿಕೆ

Pinterest LinkedIn Tumblr

ಮಂಗಳೂರು  : ಸಾರ್ವಜನಿಕ ವಿತರಣಾ ಪದ್ಧತಿಯಡಿ ಅಂತ್ಯೋದಯ (ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹೊಂದಿರುವ ಅನರ್ಹ ಕುಟುಂಬಗಳು ಪಡಿತರ ಚೀಟಿಗಳನ್ನು ದಂಡ ರಹಿತವಾಗಿ ಜೂನ್ 30 ರೊಳಗೆ ಹಿಂದುರಿಗಿಸಲು ದಿನಾಂಕವನ್ನು ವಿಸ್ತರಿಸಿ ಅವಕಾಶವನ್ನು ಕಲ್ಪಿಸಲಾಗಿದೆ

ಅನರ್ಹರು ಹೊಂದಿರುವ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತರಾಗಿ ಇಲಾಖೆಗೆ ಹಿಂದಿರುಗಿಸಬೇಕು. ಅಂತಹವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ.

ಸರಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡವರು ಆಯಾ ತಾಲೂಕಿನ ತಹಶೀಲ್ದಾರರು / ಸಹಾಯಕ ನಿರ್ದೇಶಕರು ಇವರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು.

ಅನರ್ಹರು ಹೊಂದಿರುವ ಅಂತ್ಯೋದಯ(ಎಎವೈ) ಅನ್ನ ಮತ್ತು ಆದ್ಯತಾ(ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿದವರಿಗೆ ಆದ್ಯತೇತರ(ಎಪಿಎಲ್) ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ(ಎಎವೈ) ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ಜೂನ್ 30 ರೊಳಗೆ ತಾಲೂಕಿನ ತಹಶೀಲ್ದಾರರು ಅಥವಾ ಸಹಾಯಕ ನಿರ್ದೇಶಕರು ಇವರಿಗೆ ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆದಲ್ಲಿ ಯಾವುದೇ ದಂಡ ವಿಧಿಸಲಾಗುವುದಿಲ್ಲ.

ನಂತರ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐಪಿಸಿ ಕಲಂ ಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹಾಗೂ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.