ಕರಾವಳಿ

ಚರ್ಚ್, ಸ್ಮಶಾನ,ಬಸದಿ,ಸಮುದಾಯ ಭವನ, ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ

Pinterest LinkedIn Tumblr

ಮಂಗಳೂರು, ಜೂನ್ 18 : ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಚರ್ಚ್ ಕಟ್ಟಡದ ದುರಸ್ಥಿ, ನವೀಕರಣ ಹಾಗೂ ಆವರಣ ಗೋಡೆ ಮತ್ತು ಸ್ಮಶಾನ ಆವರಣ ಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.

ಚರ್ಚ್ ದುರಸ್ಥಿ ಅಥವಾ ನವೀಕರಣಕ್ಕಾಗಿ ಕನಿಷ್ಠ 10 ಲಕ್ಷದಿಂದ ಗರಿಷ್ಠ 50 ಲಕ್ಷ ಹಾಗೂ ಸ್ಮಶಾನಗಳಿಗೆ ಮೂಲಭೂತ ಸೌಕರ್ಯಗಳಾದ ಆವರಣ ಗೋಡೆ ನಿರ್ಮಾಣ, ವಿದ್ಯುತ್ತೀಕರಣ, ಶುದ್ಧ ಕುಡಿಯುವ ನೀರಿನ ಹಾಗೂ ಕೊಳವೆ ಬಾವಿ ಸೌಕರ್ಯ, ಶವ ಇಡುವ ಕಟ್ಟಡ , ರಸ್ತೆ ಇತ್ಯಾದಿಗಳಿಗೆ ಅಂದಾಜು ವೆಚ್ಚದ ಶೇ.90 ಅಥವಾ ಗರಿಷ್ಠ 25 ಲಕ್ಷದವರೆಗೆ ಯಾವುದು ಕಡಿಮೆಯೋ ಅದರಂತೆ ಹಾಗೂ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕಾಗಿ ತಾಲೂಕು ಕೇಂದ್ರದಲ್ಲಿ ಗರಿಷ್ಠ 50 ಲಕ್ಷ ಹಾಗೂ ಜಿಲ್ಲಾ ಕೇಂದ್ರದಲ್ಲಿ ಗರಿಷ್ಠ ರೂ ಒಂದು ಕೋಟಿಯವರೆಗೆ ಹಾಗೂ ಅನಾಥಾಶ್ರಮ ಹಾಗೂ ವೃದ್ದಾಶ್ರಮಗಳನ್ನು ಪ್ರೋತ್ಸಾಹಿಸುವ ಉದ್ದೇಶದಲ್ಲಿ ಹಾಗೂ ರಾಜ್ಯದಲ್ಲಿರುವ ನಿರ್ಗತಿಕ ವೃದ್ಧರಿಗೆ ಊಟ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಸಹಾಯಧನ ಹಾಗೂ ಕರ್ನಾಟಕ ರಾಜ್ಯದ್ಯಾಂತ ಜೈನ್ ಅಲ್ಪಸಂಖ್ಯಾತ ಸಮುದಾಯವನ್ನು ಪ್ರೋತ್ಸಾಹಿಸುವ ಉದ್ದೇಶದಲ್ಲಿ, ಜೈನ್ ದೇವಾಲಯ (ಬಸದಿಗಳ) ನವೀಕರಣ, ದುರಸ್ಥಿ, ಜೀರ್ಣೋದ್ಧಾರ, ಸುಧಾರಣೆಗಾಗಿ ಗರಿಷ್ಠ 10 ಲಕ್ಷದವರೆಗೆ ಮಂಜೂರು ಮಾಡಲು ಅವಕಾಶ ನೀಡಲಾಗಿದೆ.

ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿ ಮೌಲಾನಾ ಆಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಅಥವಾ ಇಲಾಖಾ ವೆಬ್ ಸೈಟ್ (https://dom.karnataka.gov.in) ನಿಂದ ಡೌನ್ ಲೋಡ್ ಮಾಡಿಕೊಳ್ಳುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.