ಮಂಗಳೂರು, ಜೂನ್.22 : ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜೂನ್.23ರಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ. ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.
ಆದರೆ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಕರಣಗಳು ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸರ್ಕಾರದ ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
Comments are closed.