ಕರಾವಳಿ

ಮಾಲ್‌ಗಳ ಪುನರಾರಂಭಕ್ಕೆ ಶೀಘ್ರದಲ್ಲೇ ಅನುಮತಿ : ಸಿಎಂ ಬಿ.ಎಸ್‌. ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಧೀರ್ಘಕಾಲದವರೆಗೆ ಮುಚ್ಚಲ್ಪಟ್ಟ ಮಾಲ್‌ಗಳ ಪುನರಾರಂಭಕ್ಕೆ ಅನುಮತಿ ಕುರಿತು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಧೀರ್ಘಕಾಲದವರೆಗೆ ಮಾಲ್ ಗಳನ್ನು ಮುಚ್ಚಲ್ಪಟ್ಟ ಹಿನ್ನೆಲೆಯಲ್ಲಿ ಮಳಿಗೆಗಳ ಮಾಲ್ಹಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ಮಾಲ್‌ ಅಸೋಸಿಯೇಷನ್‌ನವರು ನನ್ನನ್ನು ಭೇಟಿ ಮಾಡಿ ಮಾಲ್‌ ಪುನರಾರಂಭಕ್ಕೆ ಮನವಿ ಮಾಡಿದ್ದು, ಕೆಲವು ರಿಯಾಯಿತಿಗಳನ್ನೂ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕಟ್ಟುಪಾಡುಗಳನ್ನು ವಿಧಿಸಿ ಮಾಲ್‌ಗಳ ಪುನರಾರಂಭಕ್ಕೆ ಅನುಮತಿ ನೀಡಲು ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಾಗುವುದು.

ಈ ಕುರಿತು ಸಚಿವ ಸಂಪುಟದ ಸಹೋದ್ಯೋಗಿಗಳ ಜತೆ ಚರ್ಚಿಸಿ ಆದಷ್ಟು ಬೇಗ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಸುದ್ದಿಗಾರರಲ್ಲಿ ತಿಳಿಸಿದ್ದಾರೆ.

Comments are closed.