ಕರಾವಳಿ

ಉದ್ಯಾವರದಲ್ಲಿ ಟ್ಯಾಂಕರ್-ಕಾರಿನ ನಡುವೆ ಭೀಕರ ಅಪಘಾತ: ಗೃಹರಕ್ಷಕ ದಳದ ಸಿಬ್ಬಂದಿಗೆ ಗಂಭೀರ ಗಾಯ

Pinterest LinkedIn Tumblr

ಉಡುಪಿ: ಕಾರೊಂದು ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.

ಮುಲ್ಕಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ಜಿ ರಾಕೇಶ್ (27) ಗಂಭೀರವಾಗಿ ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿ.

ರಾತ್ರಿ ಪಾಳಿಯ ಕೆಲಸ ಮುಗಿಸಿ ಕಾರಿನಲ್ಲಿ ಉಡುಪಿಯತ್ತ ಹಿಂದಿರುಗುತ್ತಿದ್ದ ರಾಕೇಶ್, ಇಂದು (ಜೂ.30 ಬುಧವಾರ) ಮುಂಜಾನೆ 5.30 ರ ಸಮಯದಲ್ಲಿ ಉದ್ಯಾವರದ ಬಳಿ ಗ್ಯಾಸ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ರಾಕೇಶ್ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದೆ. ತಕ್ಷಣ ಅವರನ್ನು ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಸದ್ಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.