ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೆಲವು ತಿಂಗಳುಗಳಿಂದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ಇಂದು ರಾಜೀನಾಮೆ ನೀಡಲಿದ್ದು ಈ ಬಾರಿಯೂ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿಲ್ಲ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಪಕ್ಷವನ್ನು ಅಧಿಕಾರ ತಂದ ಕೀರ್ತಿ ಯಡಿಯೂರಪ್ಪನವರದ್ದಾಗಿದೆ. 2007, 2008, 2018 ಮತ್ತು 2019ರಲ್ಲಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಗಾದಿಗೆ ಏರಿದ್ದರು. ಕರ್ನಾಟಕದಲ್ಲಿ ನಾಲ್ಕು ಬಾರಿ ಸಿಎಂ ಕುರ್ಚಿಗೆ ಏರಿದ ಏಕೈಕ ವ್ಯಕ್ತಿ ಬಿ.ಎಸ್.ಯಡಿಯೂರಪ್ಪ ಅವರದ್ದಾಗಿದೆ.
ಬೆಂಗಳೂರಿನಲ್ಲಿ ಇಂದು ವಿದಾಯ ಭಾಷಣ ರೀತಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದು ಈ ವೇಳೆ ಭಾವುಕರಾದರು. ಬಿಜೆಪಿ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ,ಜೆ.ಪಿ ನಡ್ಡಾ ಅವರ ಗುಣಗಾನ ಮಾಡಿದ ಬಿ.ಎಸ್.ವೈ ಮುಂದಿನ ದಿನಗಳಲ್ಲಿ ಪಕ್ಷ ಬಲವರ್ಧನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದರು.
Comments are closed.