ಮಂಗಳೂರು, ಜುಲೈ .29 : ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮವನ್ನು ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ಮಿತ್ತಳಿಕೆಯ (ಚೆಂಡುಕಳ) ಗದ್ದೆಯಲ್ಲಿ ಜು.29 ರಂದು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದ ಈ ಚಟುವಟಿಕೆಯಲ್ಲಿ ಪತ್ರಕರ್ತರು ಭತ್ತವನ್ನು ನಾಟಿ ಮಾಡಿದರು.
Comments are closed.