ಕರಾವಳಿ

ಕೋಟ, ಬ್ರಹ್ಮಾವರ ಪರಿಸರದ ಮನೆ, ದೈವಸ್ಥಾನ ಕಳವು: ನಾಲ್ವರು ಖತರ್ನಾಕ್ ಆರೋಪಿಗಳ ಬಂಧನ

Pinterest LinkedIn Tumblr

ಉಡುಪಿ: ಬ್ರಹ್ಮಾವರದ ನೆಂಚಾರು ಕರಬರಬೆಟ್ಟು ಎಂಬಲ್ಲಿ ಮನೆಯ ಬಾಗಿಲು ಒಡೆದು ಪೂಜಾ ಸಾಮಾಗ್ರಿ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಮತ್ತು ಹೆಣ್ಮುಂಜೆ ಗ್ರಾಮದ ಪ್ರಬಾಡಿ ಮೂಲ ಜಟ್ಟಿಗೆ ಮತ್ತು ಬ್ರಹ್ಮ ದೈವಸ್ಥಾನದ ಕಂಚಿನ ಘಂಟೆಗಳು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶೃಂಗೇರಿ ನಿವಾಸಿ ಗೋಪಾಲ (26), ಕೊಕ್ಕರ್ಣೆ ನಿವಾಸಿ ಅರುಣ (26), ಚೇರ್ಕಾಡಿ ನಿವಾಸಿ ರವಿ ಕುಮಾರ್‌ ಹಾಗೂ ಸಾಸ್ತಾನ ಗುಂಡ್ಮಿ ನಿವಾಸಿ ರಜಾಕ್‌ (41) ಎಂದು ಗುರುತಿಸಲಾಗಿದೆ.

ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ನೆಂಚಾರು ಗ್ರಾಮದ ಕರಬರಬೆಟ್ಟು ಎಂಬಲ್ಲಿಯ ನಿವಾಸಿ ನೀಲಕಂಠ ಕರಬ ಎಂಬವರ ಹಳೆ ಮನೆಯ ಹಿಂಬದಿ ಬಾಗಿಲು ಒಡೆದು ಮನೆಯಲ್ಲಿರುವ ಸುಮಾರು ರೂ 38200 ಮೌಲ್ಯದ ಹಿತ್ತಾಳೆಯ ಪೂಜಾ ಘಂಟೆ, ದೀಪಗಳು ಹಾಗೂ ಕೊಡಪಾನದಂತಹ ಪೂಜಾ ಸಾಮಗ್ರಿಗಳು, ಬೆಳ್ಳಿಯ ಮೂರ್ತಿಯ ಕವಚ ಹಾಗೂ 1 ಗ್ರಾಂ ಚಿನ್ನದ ಪದಕ ಹಾಗೂ ಕಬ್ಬಿಣದ ಗ್ರಹೋಪಯೋಗಿ ವಸ್ತುಗಳು ಕಳ್ಳತನವಾಗಿತ್ತು. ಅಲ್ಲದೆ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಹೆಣ್ಮುಂಜೆ ಗ್ರಾಮದ ಪ್ರಬಾಡಿ ಮೂಲ ಜಟ್ಟಿಗೆ ಮತ್ತು ಬ್ರಹ್ಮ ದೈವಸ್ಥಾನದ ಕಂಚಿನ ಘಂಟೆಗಳು ಮತ್ತು ತೂಕಳಕಗಳು ಕಳವು ಆಗಿದ್ದು ಈ ಬಗ್ಗೆ ಕ್ರಮವಾಗಿ ಕೋಟ ಮತ್ತು ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಈ ಬಗ್ಗೆ ಜಿಲ್ಲಾ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಅವರ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಹಾಗೂ ಉಡುಪಿ ಉಪ – ವಿಭಾಗದ ಪೊಲೀಸ್ ಉಪಾಧೀಕ್ಷಕ ಸುಧಾಕರ ನಾಯ್ಕ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಸಿ.ಪಿ.ಐ ಅನಂತ ಪದ್ಮನಾಭ ನೇತೃತ್ವದಲ್ಲಿ, ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಳವು ಮಾಡಿದ ದೇವಸ್ಥಾನದ ಘಂಟೆಗಳು, ದೀಪಗಳು ಹಾಗೂ ಇನ್ನಿತರ ಪೂಜಾ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ಸಿಪಿಐ ಅನಂತ ಪದ್ಮನಾಭ, ಕೋಟ ಪಿಎಸ್ಐ ಸಂತೋಷ ಬಿ.ಪಿ, ಅಪರಾಧ ವಿಭಾಗದ ಪಿಎಸ್ಐ ಪುಷ್ಪಾ, ಪ್ರೊಬೇಶನರಿ ಪಿ.ಎಸ್.ಐ ಭರತೇಶ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಗಳಾದ ಸುರೇಶ್ ಶೆಟ್ಟಿ, ರಾಜು, ಸುರೇಶ್ , ರಾಮ ದೇವಾಡಿಗ, ಸಿಬ್ಬಂದಿಗಳಾದ ಜಯರಾಮ, ಪ್ರಕಾಶ, ಕೃಷ್ಣ, ವಿಕ್ರಮ್ ಮತ್ತು ಎ.ಹೆಚ್.ಸಿ ಮಂಜುನಾಥ್ ಭಾಗವಹಿಸಿದ್ದರು.

Comments are closed.