ಕರಾವಳಿ

ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ -ಖಾಸಗಿ ಆಸ್ಪತ್ರೆಗಳಿಗೆ ಹಣ ಹಿಂದಿರುಗಿಸಲು ಆದೇಶ ನೀಡಿದ ಜಿಲ್ಲಾಧಿಕಾರಿಗಳ ಕ್ರಮ ಸ್ವಾಗತಾರ್ಹ : ಎಸ್ ಡಿ ಪಿ ಐ

Pinterest LinkedIn Tumblr

ಮಂಗಳೂರು : ಮಂಗಳೂರಿನ ಕೆಲವು ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಚಿಕಿತ್ಸೆಗೆ ದಾಖಲಾದ ರೋಗಿಗಳಿಂದ ಹೆಚ್ಚುವರಿ ಹಣ ವಸೂಲು ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೇತ್ರತ್ವದಲ್ಲಿ ನಡೆದ ಕುಂದುಕೊರತೆಗಳ ಸಭೆಯಲ್ಲಿ ಪರಿಶೀಲನೆ ನಡೆಸಿದ ಮಾನ್ಯ ಜಿಲ್ಲಾಧಿಕಾರಿ ಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ರವರು ಹೆಚ್ಚುವರಿ ಹಣ ಪಡೆದ ಮಂಗಳೂರಿನ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಕೂಡಲೇ ಆ ಹಣವನ್ನು ಸಂತ್ರಸ್ತರಿಗೆ ಹಿಂತಿರುಗಿಸಬೇಕೆಂದು ಆದೇಶಿಸಿರುವ ಕ್ರಮ ಸ್ವಾಗತಾರ್ಹ ಇದನ್ನು ಎಸ್ ಡಿ ಪಿ ಐ ಸ್ವಾಗತಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ತಿಳಿಸಿರುತ್ತಾರೆ

ಮಂಗಳೂರಿನ ಕೆಲವು ಖಾಸಗಿ ಆಸ್ಪತ್ರೆಗಳು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಬೇರೆ ಬೇರೆ ರೀತಿಯಲ್ಲಿ ಸುಲಿಯುತ್ತಿರುವ ಬಗ್ಗೆ ಎಸ್ಡಿಪಿಐ ಮತ್ತು ಜಿಲ್ಲೆಯ ಜನತೆ ಹಲವಾರು ರೀತಿಯ ದೂರುಗಳನ್ನು ಸರಕಾರಕ್ಕೆ ನೀಡಿದ್ದರೂ ಇದೀಗ ಜಿಲ್ಲಾಧಿಕಾರಿಗಳು ಈ ವಿಚಾರದಲ್ಲಿ ದಿಟ್ಟತನ ಪ್ರದರ್ಶಿಸುವ ಮೂಲಕ ಆರೋಗ್ಯ ಕ್ಷೇತ್ರವನ್ನು ಅಪ್ಪಟ ವ್ಯಾಪಾರಿ ಕೇಂದ್ರವನ್ನಾಗಿಸಿದ ಮಂಗಳೂರಿನ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸರಿಯಾದ ಬಿಸಿ ಮುಟ್ಟಿಸಿದ್ದಾರೆ.

ಇಂತಹ ಕ್ರಮಗಳ ಮೂಲಕ ಜಿಲ್ಲಾಡಳಿತ ಜಿಲ್ಲೆಯ ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯವಿದೆ.ಮಂಗಳೂರಿನ ಮೆಡಿಕಲ್ ಮಾಫಿಯಾದ ವಿರುದ್ಧ ಇತ್ತೀಚೆಗೆ ಎಸ್ ಡಿ ಪಿ ಐ ದ್ವನಿಯೆತ್ತಿತು.

ಖತೀಜಾ ಜಾಸ್ಮಿನ್ ಎಂಬ ತುಂಬು ಗರ್ಭಿಣಿ ಮಹಿಳೆಗೆ ಆದ ಅನ್ಯಾಯದ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದರೂ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಇದರ ಬಗ್ಗೆ ಕೂಡಾ ಜಿಲ್ಲಾಡಳಿತ ಸೂಕ್ತ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಿಲ್ಲಾಧಿಕಾರಿಗಳು ಜನರಲ್ಲಿ ಆತ್ಮವಿಶ್ವಾಸ ಹಾಗೂ ಭರವಸೆ ಮೂಡಿಸಬೇಕೆಂದು ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ.

Comments are closed.